SUDDIKSHANA KANNADA NEWS/ DAVANAGERE/ DATE:04-01-2025
ಶಿವಮೊಗ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ಒಂದು ವರ್ಷ ಕಳೆದಿದೆ. ನನಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇರಲಿಲ್ಲ. ಒಂದು ವರ್ಷದಲ್ಲಿ ರಾಜ್ಯ ಸರ್ಕಾರವನ್ನ ಭ್ರಷ್ಠಾಚಾರದ ವಿಚಾರದಲ್ಲಿ ತುದಿಗಾಲಿನಲ್ಲಿ ನಿಲ್ಲಿಸಿದ್ದೇನೆ. ಹಿರಿಯರ ಮನವೊಲಿಕೆ ಆಗಬೇಕಿತ್ತು. ಇಬ್ವರ ಮಾತುಗಳನ್ನ ಬದಿಗಿಟ್ಟು ಬಿಜೆಪಿಯನ್ನ ಸ್ಪಷ್ಟವಾಗಿ ಬಹುಮತಕ್ಕೆ ತರಲಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ ಇಬ್ಬರು ನಾಯಕರು ಯಾರು ಎಂಬ ಗುಟ್ಟು ಬಿಟ್ಟುಕೊಡಲಿಲ್ಲ. ಆದ್ರೆ, ಇದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಿದರು ಎಂದು ಹೇಳಲಾಗುತ್ತಿದೆ.
ಪ್ರಿಯಾಂಕ ಖರ್ಗೆಗೆ ಸಲಹೆ:
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಗಣಪತಿ ಹತ್ಯೆ ಪ್ರಕರಣ ಸಿಬಿಐನಿಂದಲೇ ಕಾಂಗ್ರೆಸ್ ಸರ್ಕಾರವಿದ್ದಾಗ ಕ್ಲೀನ್ ಚೀಟ್ ನೀಡಲಾಗಿದೆ. ಸಿಒಡಿಯಿಂದ ಖರ್ಗೆಗೆ ನ್ಯಾಯ ಸಿಗೊಲ್ಲ. ಅವರ ಪಕ್ಷದಲ್ಲೇ ಅವರ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಗೌರವಯುತವಾಗಿ ಮೃತರ ಕುಟುಂಬಕ್ಕೆ ನ್ಯಾಯಕೊಡಿಸಲು ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿ. ವೈ. ವಿಜಯೇಂದ್ರ ಒತ್ತಾಯಿಸಿದರು.
6 ತಿಂಗಳಲ್ಲಿ 734 ಬಾಂತಿಯರ ಸಾವು:
734 ಬಾಣಂತಿಯರ ಮತ್ತು 1 ಸಾವಿರಕ್ಕೂ ಹೆಚ್ಚು ನವಜಾತ ಶಿಶುಗಳ ಸಾವಾಗಿದೆ. ಇದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ. ಆರೋಗ್ಯ ಸಚಿವರು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು
ಮೆಡಿಕಲ್ ಮಾಫಿಯಾ ಕಾರಣ ಎಂದು ದೂರಿದರು.
ಬ್ಲಾಕ್ ಲೀಸ್ಟ್ ನಲ್ಲಿರುವ ಕಂಪನಿಗಳು ಔಷಧಿಗಳನ್ನ ಸರಬರಾಜು ಮಾಡುತ್ತಿವೆ. ಪ್ರಕರಣವನ್ನ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರದಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕು. ಮಾತೃಯೋಜನೆ, ಇಂಧ್ರ ಧನುಶ್ ಯೋಜನೆ ತಾಯಿಂದಿರಿಗೆ ತಲುಪುತ್ತಿಲ್ಲ. ಮೃತ ಬಾಣಂತಿಯರು ಕುಟುಂಬಕ್ಕೆ 25 ಲಕ್ಷ ರೂಪಾಯಿ ನೀಡಬೇಕು. ನವಜಾತ ಶಿಶು ಸಾವಿಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಗ್ಯಾರೆಂಟಿಗಾಗಿ ಬಸ್ ದರ ಏರಿಕೆ:
ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣ ದರವನ್ನ ಶೇಕಡಾ 15ರಷ್ಟು ಹೆಚ್ಚಿಸಲಾಗಿದೆ. ಶಕ್ತಿಯೋಜನೆಗೆ ಹಣ ಹೊಂದಿಸಲು ಸಾಧ್ಯವಾಗ್ತಾ ಇಲ್ಲ. ಪರಿಣಾಮ ಸಾರಿಗೆ ಸಂಸ್ಥೆಗಳು ಸಾವಿರಾರು ಕೋಟಿ ರೂ. ನಷ್ಟವನ್ನು ಅನುಭವಿಸುತ್ತಿವೆ. ಸಾರಿಗೆ ಸಂಸ್ಥೆಗಳು ಮುಚ್ಚುವ ಸಂಧರ್ಭ ಎದುರಾಗಿದೆ. ದರ ಏರಿಸಿ ನಿರ್ವಹಣೆ ಮಾಡಲಾಗುತ್ತಿದೆ. ಮಹಿಳೆಯರಿಗೆ ಉಚಿತ, ಪುರುಷರಿಗೆ ಪರದಾಟ ಖಚಿತ ಎಂಬಂತಾಗಿದೆ. ಹಾಗಾಗಿ ಸಿಎಂ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಎಲ್ಲಾ ಸರ್ಕಾರಗಳು ದರ ಹೆಚ್ಚಿಸಿವೆ. ದರ ಏರಿಸಿದಾಗ ಪರಿಸ್ಥಿತಿಗಳನ್ನ ಅವಲೋಕನ ಮಾಡಲಾಗುತ್ತದೆ. ಗ್ಯಾರೆಂಟಿಯನ್ನ ನಿಭಾಯಿಸಲು ರಾಜ್ಯ ಸರ್ಕಾರ ದರ ಏರಿಸಿದೆ ಎಂದರು.
ಗೋಷ್ಠಿಯಲ್ಲಿ ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ. ಎಸ್. ಅರುಣ್, ಧನಂಜಯ್ ಸರ್ಜಿ,ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ. ಡಿ. ಮೇಘರಾಜ್, ಮಾಜಿ ಶಾಸಕ
ಕೆ. ಜಿ. ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿಶಿವರಾಜು, ಹರಿಕೃಷ್ಣ ಮತ್ತಿತರರು ಹಾಜರಿದ್ದರು.