SUDDIKSHANA KANNADA NEWS/DAVANAGERE/DATE:15_12_2025
ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ಸಂಚಾರ ಮಾರ್ಗ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
READ ALSO THIS STORY: ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪರು ರಾಜ್ಯ ರಾಜಕಾರಣದಲ್ಲಿ ಸೋಲಿಲ್ಲದ ಸರದಾರರಾಗಿದ್ದು ಹೇಗೆ? ಇಂಟ್ರೆಸ್ಟಿಂಗ್ ಸ್ಟೋರಿ
ಪಾರ್ಥಿವ ಶರೀರದ ಅಂತಿಮ ಸಾರ್ವಜನಿಕರ ದರ್ಶನಕ್ಕೆ ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಈ ಸಂಬಂಧ ದಾವಣಗೆರೆ ನಗರಕ್ಕೆ ವಿವಿಧ ಕಡೆಗಳಿಂದ ಅತಿಗಣ್ಯರು, ಗಣ್ಯರು ಆಗಮಿಸುತ್ತಿದ್ದಾರೆ. ಅಲ್ಲದೇ ವಿವಿಧ ಕಡೆಗಳಿಂದ ಮಾನ್ಯರ ಅಭಿಮಾನಿಗಳು, ಸಾರ್ವಜನಿಕರು ಆಗಮಿಸುವ ನೀರಿಕ್ಷೆ ಇದ್ದು, ಆದ್ದರಿಂದ ದಾವಣಗೆರೆ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಗಾಗಿ ಸಂಚಾರ ಮಾರ್ಗಗಳು, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸಲು ಜಿಲ್ಲಾ ಪೊಲೀಸ್ ವತಿಯಿಂದ ಮನವಿ ಮಾಡಲಾಗಿದೆ.
ಸಂಚಾರ ಮಾರ್ಗ ಬದಲಾವಣೆ ವಿವರ:
- 1. ದಾವಣಗೆರೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬರುವ ಹಾಗೂ ನಿಲ್ದಾಣದಿಂದ ಹೊರ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಈರುಳ್ಳಿ ಮಾರ್ಕೆಟ್ ಮೂಲಕ ಗಣೇಶ ಹೊಟೇಲ್ ಮಾರ್ಗವಾಗಿ ಅರಳಿಮರ ವೃತ್ತ ಮಾಗನಹಳ್ಳಿ ರಸ್ತೆ ಯಿಂದ ರಿಂಗ್ ರಸ್ತೆಗೆ ಸೇರುವುದು ಅಲ್ಲಿಂದ ನೇರವಾಗಿ ಆರ್ ಟಿ ಓ ವೃತ್ತದ ಮೂಲಕ ಸಂಗೋಳ್ಳಿ ರಾಯಣ್ಣ ವೃತ್ತ – ಶಾಮನೂರು ರಸ್ತೆ ಮೂಲಕ ರಾಷ್ಟ್ರೀಯ ಹೆದ್ದಾರಿಗೆ ಸೇರುವುದು ಹಾಗೂ ನಗರ ಹೊರಗಡೆ ಹೋಗುವುದು ಹಾಗೂ ಇದೇ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬರುವುದು.
- 2. ದಾವಣಗೆರೆ ನಗರದಲ್ಲಿನ ಹಳೇ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳ ನಿಲ್ದಾಣವನ್ನು ಇಂದು ತಾತ್ಕಾಲಿಕವಾಗಿ ನಿಷೇಧಿಸಲಾಗಿರುತ್ತದೆ. ದಾವಣಗೆರೆ ನಗರದಲ್ಲಿ ಎಲ್ಲಾ ಖಾಸಗಿ ಬಸ್ಗಳ ಬಸ್ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ನಗರದ ಹೊರವಲಯಕ್ಕೆ ಸ್ಥಳಾಂತರಿಸಲಾಗಿದೆ.
ಹೊರಗಡೆಯಿಂದ ದಾವಣಗೆರೆ ನಗರಕ್ಕೆ ಬರುವ ವಾಹನಗಳ ಪಾರ್ಕಿಂಗ್ ಸ್ಥಳಗಳ ವಿವರ.
- 1. ಚಿತ್ರದುರ್ಗ ಕಡೆಯಿಂದ ಬಾಡಾ ಕ್ರಾಸ್ ಮೂಲಕ ಬರುವ ದಾವಣಗೆರೆ ನಗರಕ್ಕೆ ಪ್ರವೇಶ ಮಾಡುವ ವಾಹನಗಳಿಗೆ ಎಪಿಎಂಸಿ ಮತ್ತು ಚಿಕ್ಕನಹಳ್ಳಿ, ಡಿ ಆರ್ ಆರ್ ಶಾಲಾ ಆವರಣ ಗಳಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಇರುತ್ತದೆ.
- 2. ಹದಡಿ ರಸ್ತೆ ಮಾರ್ಗವಾಗಿ ದಾವಣಗೆರೆ ನಗರಕ್ಕೆ ಪ್ರವೇಶ ಮಾಡುವ ವಾಹನಗಳಿಗೆ ಮಾಗನೂರು ಬಸಪ್ಪ ಮೈದಾನ, ಡಿಆರ್ಎಂ ಸೈನ್ಸ್ ಕಾಲೇಜ್, ಯು.ಬಿ.ಡಿ.ಟಿ ಇಂಜಿನಿಯರಿAಗ್ ಕಾಲೇಜ್ ಮೈದಾನ ಹಾಗೂ ಜಿಲ್ಲಾ ಕ್ರೀಡಾಂಗಣದಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಇರುತ್ತದೆ.
- 3. ರಾಷ್ಟ್ರೀಯ ಹೆದ್ದಾರಿ 48 ಶಾಮನೂರು ರಸ್ತೆ ಮೂಲಕ ಬರುವ ವಾಹನಗಳು ಮೋತಿವೀರಪ್ಪ ಹಾಗೂ ಸೆಂಟ್ ಪಾಲ್ಸ್ ಶಾಲಾ ಆವರಣ
4
. ಹರಿಹರ (ಬಾತಿ ಮಾರ್ಗವಾಗಿ) ಕಡೆಯಿಂದ ಬರುವ ವಾಹನಗಳು ಅರುಣ ವೃತ್ತದ ಬಳಿ ಇರುವ ವಾಣಿಹೊಂಡ ಶೋ ರೂಂ ಪಕ್ಕದ ಖಾಲಿ ಜಾಗದಲ್ಲಿ ವಾಹನಗಳ ಪಾರ್ಕಿಂಗ್ ಮಾಡಲು ವ್ಯವಸ್ಥೆ ಇರುತ್ತದೆ. - 5. ಹರಪನಹಳ್ಳಿ ಹಾಗೂ ಜಗಳೂರು ರಸ್ತೆ ಮಾರ್ಗವಾಗಿ ಬರುವ ವಾಹನಗಳು ಜಗಳೂರು ಬಸ್ ನಿಲ್ದಾಣ ಹಾಗೂ ಎಪಿಎಂಸಿ ಮಾರ್ಕೇಟ್ ಆವರಣದಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಇರುತ್ತದೆ.
- 6. ನಗರದಲ್ಲಿ ಮಾನ್ಯರ ಪಾರ್ಥಿವ ಶರೀರ ಸಾಗುವ ಮಾರ್ಗವಾದ: ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಗೃಹದಿಂದ ಗುಂಡಿ ವೃತ್ತ, ವಿದ್ಯಾರ್ಥಿಭವನ, ಅಂಬೇಡ್ಕರ್ ವೃತ್ತ ಮೂಲಕ ಹೈಸ್ಕೂಲ್ ಮೈದಾನದನಕ್ಕೆ ಆಗಮಿಸಿ ಸಾರ್ವಜನಿಕರು ಅಂತಿಮ ದರ್ಶನವಾದ ಬಳಿಕ ಹೈಸ್ಕೂಲ್ ಮೈದಾನದಿಂದ ಪಿಬಿ ರಸ್ತೆ, ಅರುಣ ವೃತ್ತ, ಹೊಂಡದ ವೃತ್ತ, ದುರ್ಗಾಂಭಿಕಾ ದೇವಸ್ಥಾನ, ಹಗದಿಬ್ಬ ವೃತ್ತ ಮೂಲಕ ಬಿ.ಎಸ್ ಚನ್ನಬಸಪ್ಪ ಅಂಗಡಿ ಮಾರ್ಗವಾಗಿ ಚೌಕಿಪೇಟೆ ರಸ್ತೆ, ಜಗಳೂರು ಬಸ್ ನಿಲ್ದಾಣದ ಬಳಿ ಕೆ ಆರ್ ರಸ್ತೆ ಮೂಲಕ ಬಂಬೂಬಜಾರ್ ಲಿಂಕ್ ರಸ್ತೆ ಮೂಲಕ ಸಾಗಿ ಬಂಬೂಬಜಾರ್ ರಸ್ತೆಗೆ ಸೇರಿ ನಂತರ ಅಲ್ಲಿಂದ ಮಟ್ಟಿಕಲ್ಲಿನ ಬಳಿ ಇರುವ ಶ್ರೀ ಕಲ್ಲೇಶ್ವರ ರೈಸ್ ಮಿಲ್ ಮಾರ್ಗಗಳಲ್ಲಿ ಮಾನ್ಯರ ಪಾರ್ಥಿವ ಶರೀರ ಸಾಗುವ ಸಮಯದಲ್ಲಿ ಸದರಿ ಮಾರ್ಗಗಳಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
- 7. ನಗರದಲ್ಲಿ ದಿನಾಂಕ: 15-12-2025 ರಂದು ಎಲ್ಲಾ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ವಿವಿಐಪಿ /ವಿಐಪಿ ಕಾರ್ ಪಾರ್ಕಿಂಗ್ :
ದಾವಣಗೆರೆ ನಗರದ ರೇಣುಕಾ ಮಂದಿರದ ಆವರಣ, ಮಹಾನಗರ ಪಾಲಿಕೆ ಆವರಣ ಹಾಗೂ ರಾಜನಹಳ್ಳಿ ಹನುಮಂತಪ್ಪ ಕಲ್ಯಾಣ ಮಂದಿರದ ಮುಂಭಾಗದ ಸ್ಥಳಗಳಲ್ಲಿ ಅಂತಿಮ ದರ್ಶನಕ್ಕೆ ಆಗಮಿಸುವ ಅತಿಗಣ್ಯರು, ಗಣ್ಯರು ವಾಹನಗಳನ್ನು ನಿಲ್ಲಿಸುವುದು.
ದ್ವಿ ಚಕ್ರ ವಾಹನಗಳು ಪಾರ್ಕಿಂಗ್:
ಪಿ ಬಿ ರಸ್ತೆಯ ಹೈಸ್ಕೂಲ್ ಮೈದಾನದ ಬಳಿ ಇರುವ ಬೀರಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಖಾಲಿ ಜಾಗ.
- Shamanuru Shivashankarappa
- Shamanuru Shivashankarappa Death
- Shamanuru Shivashankarappa Death news
- Shamanuru Shivashankarappa Mla
- Shamanuru Shivashankarappa News
- Shamanuru Shivashankarappa News Updates
- ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ
- ಶಾಮನೂರು ಶಿವಶಂಕರಪ್ಪ
- ಶಾಮನೂರು ಶಿವಶಂಕರಪ್ಪ ಅಖಿಲ ಭಾರತ ರಾಷ್ಟ್ರೀಯ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ
- ಶಾಮನೂರು ಶಿವಶಂಕರಪ್ಪ ಅಜರಾಮರ
- ಶಾಮನೂರು ಶಿವಶಂಕರಪ್ಪ ಇನ್ನಿಲ್ಲ
- ಶಾಮನೂರು ಶಿವಶಂಕರಪ್ಪ ನೆನಪು ಮಾತ್ರ
- ಶಾಮನೂರು ಶಿವಶಂಕರಪ್ಪ ನ್ಯೂಸ್
- ಶಾಮನೂರು ಶಿವಶಂಕರಪ್ಪ ವಿಧಿವಶ





Leave a comment