ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಹನಿಟ್ರ್ಯಾಪ್ : ಸುಂದರಿ ಮನೆಗೆ ಕರೆದಳೆಂದು ಹೋಗಿ ಬರೋಬ್ಬರಿ 40 ಲಕ್ಷ ಕಳೆದುಕೊಂಡ ಬೆಂಗಳೂರಿನ ಉದ್ಯಮಿ

On: September 20, 2024 1:41 PM
Follow Us:
---Advertisement---

ಬೆಂಗಳೂರು : ಉದ್ಯಮಿಯೊಬ್ಬರು ಹನಿಟ್ರ್ಯಾಪ್‌ ಗ್ಯಾಂಗ್‌ನ ಖೆಡ್ಡಗೆ ಬಿದ್ದು 40 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿನಿಮಾ‌ ಮಾಡುವ ಹೆಸರಿನಲ್ಲಿ ಉದ್ಯಮಿಯಿಂದ ಹಣ ಪಡೆದು ವಂಚನೆ ಮಾಡಿರೋ ಆರೋಪ ಕೇಳಿ ಬಂದಿದೆ.

ಗಣೇಶ್​ ಅವರಿಗೆ ಕುಟುಂಬ ಎಂಬ ಸೋಷಿಯಲ್ ಮೀಡಿಯಾ ಆ್ಯಪ್​ನಲ್ಲಿ ಕಾವ್ಯ ಎಂಬಾಕೆ ಪರಿಚಿತಳಾಗಿದ್ದಾಳೆ. ಈ ಕಾವ್ಯ ನಾಲ್ಕು ವರ್ಷಗಳ ಹಿಂದೆ ಸಿನಿಮಾ ಮಾಡುತ್ತಿರೋದಾಗಿ ಪರಿಚಿತಳಾಗಿದ್ದಳಂತೆ. ನಿರ್ದೇಶಕ ಎಸ್.ಆರ್.ಪಾಟೀಲ್ ಎಂಬುವವರಿಗೆ 4.25 ಲಕ್ಷ ಹಣ ವರ್ಗಾಯಿಸಿಕೊಂಡಿದ್ದಳಂತೆ. ಕೊಟ್ಟ ಹಣ ವಾಪಸ್ಸು ಕೇಳಿದಾಗ ಕಾವ್ಯ ಗೊಟ್ಟಿಗೆರೆ ಬಳಿ ಗಣೇಶ್​ರನ್ನು ಕರೆಸಿಕೊಂಡು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿ ಅದನ್ನ ವೀಡಿಯೋ ಮಾಡಿ ಬಳಿಕ ಹನಿಟ್ರ್ಯಾಪ್ ಮಾಡಿದ್ದಾಳೆ ಎಂದು ತಿಳಿದುಬಂದಿದೆ.

ಮಹಿಳೆ ಸಿನಿಮಾ‌ ಮಾಡೋಣ, ನಾನು ಅದೇ ಫೀಲ್ಡ್‌ನಲ್ಲಿದ್ದೇನೆ ಎಂದು ಸುಳ್ಳು ಹೇಳಿ ಉದ್ಯಮಿ ಸ್ನೇಹ ಮಾಡಿದ್ದಳು. ಇದಾದ ಕೆಲ ದಿನಗಳ‌ ನಂತರ ನಮ್ಮ ಡೈರೆಕ್ಟರ್‌ಗೆ ಹಣದ ಕಷ್ಟ ಇದೆ ಎಂದು ಹೇಳಿ ಉದ್ಯಮಿಯಿಂದ ನಾಲ್ಕು ಲಕ್ಷ ರೂ, ಹಣ ಪಡೆದಿದ್ದಾಳೆ. ನಂತರ ಹಣ ವಾಪಸ್ ಕೇಳಿದಾಗ ತನ್ನ ರೂಮಿಗೆ ಕರೆಸಿಕೊಂಡು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿ ಅದನ್ನ ವೀಡಿಯೋ ಮಾಡಿಕೊಂಡಿದ್ದಾಳೆ. ಬಳಿಕ ಇದೇ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಉದ್ಯಮಿಯಿಂದ ಬ್ರಾಸ್‌ಲೈಟ್, ಚೈನ್ ಅಂತೆಲ್ಲಾ ಸುಮಾರು 40 ಲಕ್ಷ ರೂಪಾಯಿ ಹಣ ಪೀಕಿದ್ದಾಳೆ. ಅಷ್ಟಕ್ಕೆ ಸುಮ್ಮನಾಗದೇ ಕಾರು ಕೊಡಿಸು ಎಂದು ದುಂಬಾಲು ಬಿದ್ದಿದ್ದಾಳೆ. ಇದಕ್ಕೆ ಒಪ್ಪದಿದ್ದಾಗ ಆರೋಪಿ ಮಹಿಳೆ ತನ್ನ ಸ್ನೇಹಿತರಾದ ರವಿ ಮತ್ತು ದಿಲೀಪ್ ಎಂಬವರಿಂದ ಕರೆ ಮಾಡಿಸಿ ಹಣಕ್ಕೆ ಧಮ್ಕಿ ಹಾಕಿಸಿದ್ದಾಳೆ. ಹಣ ಕೊಡದಿದ್ದರೆ ವೀಡಿಯೋಗಳನ್ನ ಟಿವಿಗೆ ಕೊಡೋದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಅಷ್ಟೇ ಅಲ್ಲದೆ ಹಣ ನೀಡದಿದ್ದಾಗ ಸೋಷಿಯಲ್ ಮೀಡಿಯಾದಲ್ಲಿ ದೂರುದಾರನ ಫೋಟೋ ಹಾಕಿ ಮಾನಹರಣ ಮಾಡಿರುವುದಾಗಿ ಉದ್ಯಮಿ ದೂರು ನೀಡಿದ್ದಾರೆ.

ಉದ್ಯಮಿ ಗಣೇಶ್ ನೀಡಿದ ದೂರಿನ ಆಧಾರದ ಮೇಲೆ ಕಾವ್ಯ, ದಿಲೀಪ್, ರವಿಕುಮಾರ್ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಹನಿಟ್ರ್ಯಾಪ್ ಸುಂದರಿ ಮತ್ತು ಗ್ಯಾಂಗ್‌ ಹುಡುಕಾಟ ನಡೆಸಿದ್ದಾರೆ.

Join WhatsApp

Join Now

Join Telegram

Join Now

Leave a Comment