SUDDIKSHANA KANNADA NEWS/ DAVANAGERE/ DATE:18-01-2025
ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ್ ಭೇಟಿ ಮಾಡಿ ಆಶೀರ್ವಾದ ಪಡೆದರು.
ಬೆಂಗಳೂರಿನ ಸದಾಶಿವನಗರ ಅವರ ನಿವಾಸದಲ್ಲಿ ಭೇಟಿ ಮಾಡಿದ ಬಸವರಾಜು ವಿ. ಶಿವಗಂಗಾ ಅವರು, ಭೇಟಿಯಾಗಿ ಆರೋಗ್ಯ ವಿಚಾರಿಸಿ, ಶಾಮನೂರು ಶಿವಶಂಕರಪ್ಪರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಈ ವೇಳೆ ಸಚಿವ ಈಶ್ವರ್ ಖಂಡ್ರೆ, ವೀರಶೈವ ಮಹಾಸಭಾದ ಪದಾಧಿಕಾರಿಗಳು, ಎಸ್. ಎಸ್. ಗಣೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.