ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಚಿವರ ವಿರುದ್ಧವೇ ಬುಸುಗುಟ್ಟಿದ್ದ ಬಸವರಾಜ್ ಶಿವಗಂಗಾ, ಎಸ್. ಎಸ್. ಮಲ್ಲಿಕಾರ್ಜುನ್ ಜೊತೆಯಾಗಿ.. ಹಿತವಾಗಿ…!

On: October 8, 2025 7:10 PM
Follow Us:
ಎಸ್. ಎಸ್. ಮಲ್ಲಿಕಾರ್ಜುನ್
---Advertisement---

SUDDIKSHANA KANNADA NEWS/DAVANAGERE/DATE:08_10_2025

ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಬಹಿರಂಗವಾಗಿಯೇ ಬುಸುಗುಟ್ಟಿದ್ದ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಮತ್ತು ಎಸ್. ಎಸ್. ಮಲ್ಲಿಕಾರ್ಜುನ್ ಅವರು ಜೊತೆಯಾಗಿ ಕಾಣಿಸಿಕೊಂಡರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚನ್ನಗಿರಿಗೆ ಆಗಮಿಸಿದ್ದ ವೇಳೆ ಸಚಿವರು ಮತ್ತು ಶಾಸಕರು ಖುಷಿ ಖುಷಿಯಾಗಿ ಮಾತನಾಡಿದರು.

READ ALSO THIS STORY: ದಾವಣಗೆರೆ ನೂತನ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಪಂಪಾಪತಿ ಹೆಸರು: ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮಹತ್ವದ ಘೋಷಣೆ

ಕಾರ್ಯಕ್ರಮಕ್ಕೂ ಮುನ್ನ ಬಸವರಾಜ್ ಶಿವಗಂಗಾ ಮತ್ತು ಎಸ್. ಎಸ್. ಮಲ್ಲಿಕಾರ್ಜುನ್ ಅವರು ಅಕ್ಕಪಕ್ಕದಲ್ಲಿಯೇ ಕುಳಿತು ಗಮನ ಸೆಳೆದರು. ಇನ್ನು ಕಾರ್ಯಕ್ರಮದಲ್ಲಿಯೂ ಜೊತೆಯಾಗಿ ಕಾಣಿಸಿಕೊಂಡರು.

ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರು ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಕೈಗೆ ಸಿಗಲ್ಲ, ಫೋನ್ ಕರೆ ಸ್ವೀಕರಿಸಲ್ಲ, ನಮ್ಮ ಕೆಲಸಗಳು ಆಗುತ್ತಿಲ್ಲ. ವ್ಯಾಪಾರ ವಹಿವಾಟು ನಡೆಸಿಕೊಂಡು
ಇರುವವರನ್ನು ಸಚಿವ ಸ್ಥಾನದಿಂದ ತೆಗೆಯಬೇಕು ಎಂದು ಹೈಕಮಾಂಡ್ ಗೆ ಒತ್ತಾಯಿಸಿದ್ದಾರೆ. ಮಾತ್ರವಲ್ಲ, ಮಲ್ಲಿಕಾರ್ಜುನ್ ಅವರನ್ನು ಬದಲಾಯಿಸಿ ಬೇರೆಯೊಬ್ಬರನ್ನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು ಒತ್ತಾಯಿಸಿದ್ದರು.

ಆದ್ರೆ, ಚನ್ನಗಿರಿಯಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ಜಿಲ್ಲೆ ವತಿಯಿಂದ ಏರ್ಪಡಿಸಿದ್ದ ಚನ್ನಗಿರಿಯ ಅಜ್ಜಿಹಳ್ಳಿ ಬಳಿ ನೂತನವಾಗಿ ನಿರ್ಮಾಣ ಮಾಡಿರುವ ಬಸ್ ಘಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವರು ಮತ್ತು ಶಾಸಕರು ಜೊತೆಜೊತೆಯಾಗಿ ನಗು ನಗುತ್ತಾ ಕಾಣಿಸಿಕೊಂಡಿದ್ದು ಕಾಂಗ್ರೆಸ್ ಕಾರ್ಯಕರ್ತರ ಗಮನ ಸೆಳೆಯಿತು.

ಇನ್ನು ಸಚಿವ ಮಲ್ಲಿಕಾರ್ಜುನ್ ಅವರು ಸಹ ಅವನೊಬ್ಬ ಮೆಂಟಲ್. ಏನೇನೋ ಮಾತನಾಡುತ್ತಾನೆ. ಹೆಚ್ಚು ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂದು ಬಸವರಾಜ್ ಶಿವಗಂಗಾ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

Leave a Comment