SUDDIKSHANA KANNADA NEWS/DAVANAGERE/DATE:08_10_2025
ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಬಹಿರಂಗವಾಗಿಯೇ ಬುಸುಗುಟ್ಟಿದ್ದ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಮತ್ತು ಎಸ್. ಎಸ್. ಮಲ್ಲಿಕಾರ್ಜುನ್ ಅವರು ಜೊತೆಯಾಗಿ ಕಾಣಿಸಿಕೊಂಡರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚನ್ನಗಿರಿಗೆ ಆಗಮಿಸಿದ್ದ ವೇಳೆ ಸಚಿವರು ಮತ್ತು ಶಾಸಕರು ಖುಷಿ ಖುಷಿಯಾಗಿ ಮಾತನಾಡಿದರು.
READ ALSO THIS STORY: ದಾವಣಗೆರೆ ನೂತನ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಪಂಪಾಪತಿ ಹೆಸರು: ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮಹತ್ವದ ಘೋಷಣೆ
ಕಾರ್ಯಕ್ರಮಕ್ಕೂ ಮುನ್ನ ಬಸವರಾಜ್ ಶಿವಗಂಗಾ ಮತ್ತು ಎಸ್. ಎಸ್. ಮಲ್ಲಿಕಾರ್ಜುನ್ ಅವರು ಅಕ್ಕಪಕ್ಕದಲ್ಲಿಯೇ ಕುಳಿತು ಗಮನ ಸೆಳೆದರು. ಇನ್ನು ಕಾರ್ಯಕ್ರಮದಲ್ಲಿಯೂ ಜೊತೆಯಾಗಿ ಕಾಣಿಸಿಕೊಂಡರು.
ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರು ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಕೈಗೆ ಸಿಗಲ್ಲ, ಫೋನ್ ಕರೆ ಸ್ವೀಕರಿಸಲ್ಲ, ನಮ್ಮ ಕೆಲಸಗಳು ಆಗುತ್ತಿಲ್ಲ. ವ್ಯಾಪಾರ ವಹಿವಾಟು ನಡೆಸಿಕೊಂಡು
ಇರುವವರನ್ನು ಸಚಿವ ಸ್ಥಾನದಿಂದ ತೆಗೆಯಬೇಕು ಎಂದು ಹೈಕಮಾಂಡ್ ಗೆ ಒತ್ತಾಯಿಸಿದ್ದಾರೆ. ಮಾತ್ರವಲ್ಲ, ಮಲ್ಲಿಕಾರ್ಜುನ್ ಅವರನ್ನು ಬದಲಾಯಿಸಿ ಬೇರೆಯೊಬ್ಬರನ್ನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು ಒತ್ತಾಯಿಸಿದ್ದರು.
ಆದ್ರೆ, ಚನ್ನಗಿರಿಯಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ಜಿಲ್ಲೆ ವತಿಯಿಂದ ಏರ್ಪಡಿಸಿದ್ದ ಚನ್ನಗಿರಿಯ ಅಜ್ಜಿಹಳ್ಳಿ ಬಳಿ ನೂತನವಾಗಿ ನಿರ್ಮಾಣ ಮಾಡಿರುವ ಬಸ್ ಘಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವರು ಮತ್ತು ಶಾಸಕರು ಜೊತೆಜೊತೆಯಾಗಿ ನಗು ನಗುತ್ತಾ ಕಾಣಿಸಿಕೊಂಡಿದ್ದು ಕಾಂಗ್ರೆಸ್ ಕಾರ್ಯಕರ್ತರ ಗಮನ ಸೆಳೆಯಿತು.
ಇನ್ನು ಸಚಿವ ಮಲ್ಲಿಕಾರ್ಜುನ್ ಅವರು ಸಹ ಅವನೊಬ್ಬ ಮೆಂಟಲ್. ಏನೇನೋ ಮಾತನಾಡುತ್ತಾನೆ. ಹೆಚ್ಚು ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂದು ಬಸವರಾಜ್ ಶಿವಗಂಗಾ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.