Home ಕ್ರೈಂ ನ್ಯೂಸ್ ಮದ್ಯಪಾನ, ತಂಬಾಕು ಸೇವನೆ ಹದಿಹರೆಯದವರಿಗೆ ತಂದಿದೆ ಆಪತ್ತು: 8 ವರ್ಷಕ್ಕೆ ಮಕ್ಕಳು ಎಣ್ಣೆದಾಸರಾಗಿರುವ ಆಘಾತಕಾರಿ ಮಾಹಿತಿ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಮದ್ಯಪಾನ, ತಂಬಾಕು ಸೇವನೆ ಹದಿಹರೆಯದವರಿಗೆ ತಂದಿದೆ ಆಪತ್ತು: 8 ವರ್ಷಕ್ಕೆ ಮಕ್ಕಳು ಎಣ್ಣೆದಾಸರಾಗಿರುವ ಆಘಾತಕಾರಿ ಮಾಹಿತಿ!

Share
ಮದ್ಯಪಾನ
Share

ಬೆಂಗಳೂರು: ಪ್ರತಿ ಮೂವರು ಹದಿಹರೆಯದವರಲ್ಲಿ ಒಬ್ಬರು ಮದ್ಯ ಅಥವಾ ತಂಬಾಕು ಸೇವನೆಯಿಂದಾಗಿ ಆರೋಗ್ಯ ಸಮಸ್ಯೆಗಳ ಅಪಾಯದಲ್ಲಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸಿದ 33% ಜನರು ಮದ್ಯಪಾನಕ್ಕೆ ದಾಸರಾಗಿದ್ದಾರೆ. ಸುಮಾರು 18% ಜನರು ತಂಬಾಕು ವ್ಯಸನಕ್ಕೆ ಒಳಗಾಗಿದ್ದಾರೆ. ಮದ್ಯಪಾನವನ್ನು ಪ್ರಾರಂಭಿಸುವ ಸರಾಸರಿ ವಯಸ್ಸು 17 ವರ್ಷ ಎಂದು ವರದಿಯಾಗಿದೆ. ಕೆಲವು ಪ್ರಕರಣಗಳಲ್ಲಿ 8 ವರ್ಷಕ್ಕೇ ಮಕ್ಕಳು ಮದ್ಯಪಾನ ಆರಂಭಿಸಿರುವುದೂ ದಾಖಲಾಗಿದೆ.

ಅಂದ ಹಾಗೆ ಈ ಆಘಾತಕಾರಿ ಮಾಹಿತಿ ನೀಡಿರುವುದು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ. ಬೆಂಗಳೂರಿನಲ್ಲಿ 4,093 ವಿದ್ಯಾರ್ಥಿಗಳನ್ನು ಒಳಗೊಂಡ ಇತ್ತೀಚಿನ ಅಧ್ಯಯನವು ಗಂಭೀರ ಕಳವಳಗಳನ್ನು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಎಲ್ಲ ಪಬ್‌ಗಳು, ಬ್ರೂವರೀಸ್, ಬಾರ್‌, ಕ್ಲಬ್‌ಗಳು, ಲಾಂಜ್, ರೆಸ್ಟೋರೆಂಟ್ ಮತ್ತು ಮದ್ಯ ಮಾರಾಟ ಮಾಡುವ ಸಂಸ್ಥೆಗಳಿಗೆ ಅಪ್ರಾಪ್ತ ವಯಸ್ಕರ ಪ್ರವೇಶ ಮತ್ತು ಅಪ್ರಾಪ್ತ ವಯಸ್ಕರ ಮದ್ಯಪಾನವನ್ನು ಕಟ್ಟುನಿಟ್ಟಾಗಿ ತಡೆಗಟ್ಟಲು ನೋಟಿಸ್ ನೀಡುವಂತೆ ನಗರ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಪೋಸ್ಟ್ ನಲ್ಲಿ ಸಚಿವರು ತಿಳಿಸಿದ್ದಾರೆ.

ಇದು ಕೇವಲ ಪರವಾನಗಿ ಸಮಸ್ಯೆಯಲ್ಲ. ಇದು ಯುವ ಸುರಕ್ಷತೆ ಮತ್ತು ಸಾರ್ವಜನಿಕ-ಆರೋಗ್ಯದ ವಿಚಾರ. ಮದ್ಯ ಮಾರಾಟ ಮಾಡುವ ಎಲ್ಲ ಸಂಸ್ಥೆಗಳು ಗ್ರಾಹಕರ ಪ್ರವೇಶ ಮತ್ತು ಮದ್ಯ ಪೂರೈಕೆಯ ಮೊದಲು ಕಟ್ಟುನಿಟ್ಟಾದ ವಯಸ್ಸಿನ ಪರಿಶೀಲನಾ ನಿಯಮಗಳನ್ನು ಜಾರಿಗೆ ತರಬೇಕು ಎಂದು ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಕೊಟ್ಟಿರುವ ಪ್ರಮುಖ ನಿರ್ದೇಶನಗಳು:

– ಮಾನ್ಯವಾದ ಗುರುತಿನ ಚೀಟಿ ಇಲ್ಲದಿದ್ದರೆ, ಪ್ರವೇಶವಿಲ್ಲ

– ಸರ್ಕಾರ ನೀಡಿದ ವಯಸ್ಸಿನ ಪುರಾವೆ ಕಡ್ಡಾಯ

– ಅಪ್ರಾಪ್ತ ವಯಸ್ಕರಿಗೆ ಸೇವೆ ಸಲ್ಲಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ

– ಮಾಲೀಕರು, ವ್ಯವಸ್ಥಾಪಕರು ಮತ್ತು ಪರವಾನಗಿ ಹೊಂದಿರುವವರೇ ಹೊಣೆಗಾರರು

– ಪ್ರವೇಶ ದ್ವಾರದಲ್ಲಿರುವ ಸಿಸಿಟಿವಿ ಕಾರ್ಯನಿರ್ವಹಿಸಬೇಕು ಮತ್ತು ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು

– ಸಂಸ್ಥೆಗಳು, ಆರ್‌ಡಬ್ಲ್ಯೂಎಗಳು ಮತ್ತು ನಾಗರಿಕ ಗುಂಪುಗಳೊಂದಿಗೆ ಪೊಲೀಸ್ ಸಮನ್ವಯ

– ವಾಣಿಜ್ಯ ಲಾಭಕ್ಕಾಗಿ ನಮ್ಮ ಮಕ್ಕಳ ಸುರಕ್ಷತೆ ಮತ್ತು ಭವಿಷ್ಯದ ನಷ್ಟವನ್ನು ಭರಿಸಲು ಸಾಧ್ಯವಿಲ್ಲ.

– ಕರ್ನಾಟಕವು ಅದಕ್ಕೆ ಅವಕಾಶ ಕೊಡುವ ಸಂಸ್ಥೆಗಳ ವಿರುದ್ಧ ಶೂನ್ಯ ಸಹಿಷ್ಣುತೆಯ ವಿಧಾನವನ್ನು ಅನುಸರಿಸುತ್ತದೆ.
“ಗುರುತಿನ ಚೀಟಿ ಇಲ್ಲದಿದ್ದರೆ, ಪ್ರವೇಶವಿಲ್ಲ”. ಅಪ್ರಾಪ್ತ ವಯಸ್ಕರಿಗೆ ಮದ್ಯ ಮಾರಾಟ ಅಪರಾಧ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.