Home ಕ್ರೈಂ ನ್ಯೂಸ್ ಬಾರೆ ಬಾರೆ ಊಟಕ್ಕೆ ಅಂತಾ ಕರೆದ: ಮದುವೆಗೆ ಒಪ್ಪದಿದ್ದಕ್ಕೆ ಬೆಂಗಳೂರಿನಲ್ಲಿ ಪ್ರೇಯಸಿ ಕೊಂದ ಪ್ರಿಯಕರ ಬಂಧನ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಬಾರೆ ಬಾರೆ ಊಟಕ್ಕೆ ಅಂತಾ ಕರೆದ: ಮದುವೆಗೆ ಒಪ್ಪದಿದ್ದಕ್ಕೆ ಬೆಂಗಳೂರಿನಲ್ಲಿ ಪ್ರೇಯಸಿ ಕೊಂದ ಪ್ರಿಯಕರ ಬಂಧನ!

Share
ಮದುವೆ
Share

ಬೆಂಗಳೂರು: ಮದುವೆಗೆ ಒಪ್ಪದ ಕಾರಣಕ್ಕೆ ಪ್ರಿಯಕರನೇ ತನ್ನ 23 ವರ್ಷದ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಅಂಜಲಿ (23) ಕೊಲೆಯಾದ ದುರ್ದೈವಿ. ಆರೋಪಿ ರಾಜೀವ್‌ನನ್ನು ಬೆಂಗಳೂರು ಪೊಲೀಸರು ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಬಂಧಿಸಿದ್ದಾರೆ.

ಘಟನೆಯ ವಿವರ: ಅಂಜಲಿ ಹಾಗೂ ರಾಜೀವ್ ಕಳೆದ 3-4 ವರ್ಷಗಳಿಂದ ಒಂದೇ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ರಾಜೀವ್ ಹಿನ್ನೆಲೆ ಸರಿ ಇಲ್ಲದ ಕಾರಣ ಅಂಜಲಿ ಪೋಷಕರು ಇವರ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಪೋಷಕರ ಒತ್ತಾಯಕ್ಕೆ ಮಣಿದಿದ್ದ ಅಂಜಲಿ, ಇತ್ತೀಚೆಗೆ ರಾಜೀವ್‌ನನ್ನು ಭೇಟಿಯಾಗುವುದನ್ನು ಹಾಗೂ ಆತನ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದರು.

ಭಾನುವಾರ ರಾತ್ರಿ ರಾಜೀವ್, ಅಂಜಲಿಯನ್ನು ರಾತ್ರಿ ಊಟದ (ಡಿನ್ನರ್) ನೆಪದಲ್ಲಿ ಹೊರಗೆ ಕರೆದಿದ್ದನು. ಊಟದ ಸಮಯದಲ್ಲೂ ಮತ್ತೆ ಮದುವೆಯ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಜೋರಾಗಿ ಗಲಾಟೆಯಾಗಿದೆ. ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಅಂಜಲಿ ಅಲ್ಲಿಂದ ಹೊರಟು ಹೋಗಲು ಯತ್ನಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ರಾಜೀವ್, ತಾನು ಮೊದಲೇ ತಂದಿದ್ದ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಮನಸೋಇಚ್ಛೆ ಇರಿದಿದ್ದಾನೆ.

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ. ಸದ್ಯ ಮೃತದೇಹವನ್ನು ಪೋಸ್ಟ್‌ಮಾರ್ಟಮ್‌ಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles