SUDDIKSHANA KANNADA NEWS/ DAVANAGERE/ DATE:27-07-2024
ದಾವಣಗೆರೆ: ತುಂಬಿದ ಭದ್ರಾ ಜಲಾಶಯಕ್ಕೆ ಜುಲೈ 30ರಂದು ಬೆಳಿಗ್ಗೆ 11 ಗಂಟೆಗೆ ವಿಶೇಷ ಪೂಜೆಯೊಂದಿಗೆ, ರೈತ ಸಮುದಾಯಕ್ಕೆ ಒಳ್ಳೆಯದಾಗಲಿ ಹಾಗೂ ಪ್ರತಿ ವರ್ಷ ಭದ್ರಾ ಜಲಾಶಯ ಇದೇ ರೀತಿ ಮೈದುಂಬಿಕೊಳ್ಳಲಿ ಎಂದು ಸಂಕಲ್ಪಿಸಿ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ಶಾಸಕರು, ಕೇಂದ್ರದ ಮಾಜಿ ಸಚಿವರು ಹಾಗೂ ಬಿಜೆಪಿ ಮುಖಂಡರು ಬಾಗಿನ ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬಾಗಿನ ಸಮರ್ಪಣಾ ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಹರಿಹರ ಶಾಸಕ ಬಿ. ಪಿ. ಹರೀಶ್, ವಿಧಾನಪರಿಷತ್ ಸದಸ್ಯರಾದ ಸಿ.ಟಿ. ರವಿ, ಎನ್. ರವಿಕುಮಾರ್, ಕೆ.ಎಸ್.ನವೀನ್, ಮಾಜಿ ಶಾಸಕರಾದ ಎಸ್. ವಿ. ರಾಮಚಂದ್ರರವರು. ಪ್ರೊ. ಲಿಂಗಣ್ಣ, ಹೆಚ್. ಪಿ. ರಾಜೇಶ್, ಬಿಜೆಪಿ. ಜಿಲ್ಲಾಧ್ಯಕ್ಷ ಎನ್. ರಾಜಶೇಖರ್, ಮಾಜಿ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ್ ಹನಗವಾಡಿ, ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಪಾಲಿಕೆ ಉಪಮೇಯರ್ ಯಶೋಧ ಯೋಗೇಶ್, ದಾವಣಗೆರೆ ಮಹಾನಗರ ಪಾಲಿಕೆಯ ಸದಸ್ಯರು, ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಜಿಲ್ಲಾ ಬಿಜೆಪಿ ಪದಾಧಿಕಾರಿಗಳು, ಬಿಜೆಪಿ ಪಕ್ಷದ ಮಂಡಲಗಳ ಅಧ್ಯಕ್ಷರು, ಪದಾಧಿಕಾರಿಗಳು, ರೈತ ಮುಖಂಡರುಗಳು ಬಾಗಿನ ಸಮರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಪ್ರಪ್ರಯುಕ್ತ, ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು, ಪಕ್ಷದ ಅಭಿಮಾನಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಬಾಗಿನ ಸಮರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಬಿ.ಜೆ.ಪಿ. ಜಿಲ್ಲಾ ಮಾಜಿ ಪ್ರಧಾನಕಾರ್ಯದರ್ಶಿ ಬಿ.ಎಸ್.ಜಗದೀಶ್ ವಿನಂತಿಸಿದ್ದಾರೆ.