SUDDIKSHANA KANNADA NEWS/ DAVANAGERE/ DATE_07-07_2025
ದಾವಣಗೆರೆ: ಭದ್ರಾ ಡ್ಯಾಂ (BHADRA DAM) ಇತಿಹಾಸದಲ್ಲೇ ಮೊದಲ ಬಾರಿಗೆ ಜುಲೈ ತಿಂಗಳ ಆರಂಭದಲ್ಲೇ ಅತಿ ಹೆಚ್ಚು ನೀರು ಹರಿದು ಬಂದಿದೆ. ಜಲಾಶಯ ಭರ್ತಿಗೆ ಕೇವಲ 15 ಅಡಿ ನೀರು ಬರಬೇಕಷ್ಟೇ. ಜಲಾಶಯದ ಇಂದಿನ ನೀರಿನ ಮಟ್ಟ 171.9 ಅಡಿ ಇದ್ದು, ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಭದ್ರಾ ಡ್ಯಾಂಗೆ 20626 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಹೊರ ಹರಿವು 5198 ಕ್ಯೂಸೆಕ್ ಬಿಡಲಾಗುತ್ತಿದೆ. ಕಳೆದ ವರ್ಷ 131.10 ಅಡಿ ಇತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಇಂದು ಡ್ಯಾಂನ ನೀರಿನ ಮಟ್ಟ 39.6 ಅಡಿ ಹೆಚ್ಚು ನೀರು ಸಂಗ್ರಹವಾಗಿದೆ.
READ ALSO THIS STORY: EXCLUSIVE: Davanagere PSI ನಾಗರಾಜ್ ಪತ್ನಿ ಕೆಟಿಜೆ ನಗರ ಪೊಲೀಸ್ ಠಾಣೆಗೆ ಕೊಟ್ಟ ದೂರಿನಲ್ಲೇನಿದೆ?
ಈಗ ಬರುತ್ತಿರುವ ಒಳಹರಿವಿನಂತೆ ಜಲಾಶಯಕ್ಕೆ ನೀರು ಹರಿದು ಬಂದರೆ ಈ ತಿಂಗಳೊಳಗೆ ಭರ್ತಿಯಾಗುವ ಸಾಧ್ಯತೆ ಹೆಚ್ಚಿದೆ. ಚಿಕ್ಕಮಗಳೂರು, ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಜಲಾಶಯವು ಇಷ್ಟು ಬೇಗ ಭರ್ತಿಯಾಗಿರುವುದಕ್ಕೆ ಭದ್ರಾ ಅಚ್ಚುಕಟ್ಟು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ರೈತರು, ಜನರ ಸಂತಸಕ್ಕೆ ಕಾರಣವಾಗಿದೆ.
ಭದ್ರಾ ನದಿಪಾತ್ರದ ತಗ್ಗುಪ್ರದೇಶದ ಜನರಿಗೆ ಎಚ್ಚರಿಕೆ:
ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಜಲಾಶಯದ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಸಾಕಷ್ಟು ಒಳಹರಿವು ಬರುತ್ತಿದೆ.
ನೀರಿನ ಸಂಗ್ರಹ ಮಟ್ಟವು ಹೆಚ್ಚಾಗತೊಡಗಿದೆ. ಹರಿದು ಬರುವ ಒಳಹರಿವಿನ ಪ್ರಮಾಣ 20000-25000 ಕ್ಯೂಸೆಕ್ಸ್ ಇದ್ದು, ಅಣಿಕಟ್ಟು ಸುರಕ್ಷತೆ ದೃಷ್ಠಿಯಿಂದ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಸ್ಪಿಲ್ ವೇ ಗೇಟ್ ಮುಖಾಂತರ ಬೀಡಲಾಗುವುದು.
ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕು. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
ಭದ್ರಾ ಜಲಾಶಯದ ನೀರಿನ ಮಟ್ಟ
Date:07_07_2025
ಇಂದಿನ ನೀರಿನ ಮಟ್ಟ: 168.5 ಅಡಿ
ಒಳ ಹರಿವು: 20,626 ಕ್ಯೂಸೆಕ್
ಹೊರ ಹರಿವು: 5196 ಕ್ಯೂಸೆಕ್
ಕಳೆದ ವರ್ಷ ಇದೇ ದಿನ ನೀರಿನ ಮಟ್ಟ: 131.10 ಅಡಿ
ಕೆಪಾಸಿಟಿ: 21.691 ಟಿಎಂಸಿ
ಜಲಾಶಯದ ಗರಿಷ್ಠ ಮಟ್ಟ: 186 ಅಡಿ