ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭದ್ರಾ ಡ್ಯಾಂ (Bhadra Dam) ತುಂಬಲು ಇನ್ನು ಕೇವಲ 13 ಅಡಿ: ಇಂದು ನೀರಿನ ಮಟ್ಟ, ಒಳಹರಿವು ಎಷ್ಟಿದೆ?

On: July 9, 2025 9:03 AM
Follow Us:
Bhadra Dam
---Advertisement---

SUDDIKSHANA KANNADA NEWS/ DAVANAGERE/ DATE_09-07_2025

ದಾವಣಗೆರೆ: ಚಿಕ್ಕಮಗಳೂರು ಹಾಗೂ ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಕುಂಠಿತವಾಗಿದ್ದು, ಜಲಾಶಯಕ್ಕೆ ಬರುತ್ತಿದ್ದ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ. ಭದ್ರಾ ಡ್ಯಾಂ (Bhadra Dam) ನೀರಿನ ಮಟ್ಟ 172.8 ಅಡಿ ನೀರು ಬೆಳಿಗ್ಗೆ ಹೊತ್ತಿಗೆ ಇತ್ತು. ಜಲಾಶಯಕ್ಕೆ 15,995 ಕ್ಯೂಸೆಕ್ ಒಳಹರಿವು ಇದ್ದು, ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಜಲಾಶಯವು 173 ಅಡಿ ದಾಟಿದೆ ಎಂದು ಭದ್ರಾ ಡ್ಯಾಂನ ಅಧಿಕಾರಿಗಳು ತಿಳಿಸಿದ್ದಾರೆ.

READ ALSO THIS STORY: ನಾನೇನೂ ಕೆಜೆಪಿ ಕಟ್ಟಿಲ್ಲ ರಾಯಣ್ಣ ಬ್ರಿಗೇಡ್ ಮಾಡಿಲ್ಲ, ಬಿಜೆಪಿ ಬಿಡಲ್ಲ: ವಿರೋಧಿಗಳಿಗೆ ಟಾಂಗ್ ಕೊಟ್ಟ ಜಿ. ಎಂ. ಸಿದ್ದೇಶ್ವರ

ಜಲಾಶಯದ ಇಂದಿನ ನೀರಿನ ಮಟ್ಟ 172.8 ಅಡಿ ನೀರು ಇದ್ದು, ಹೊರ ಹರಿವು 3102 ಕ್ಯೂಸೆಕ್ ಇದೆ. ಕಳೆದ ವರ್ಷ ಇದೇ ದಿನ ಜಲಾಶಯದ ನೀರಿನ ಮಟ್ಟ 134.2 ಅಡಿ ಇತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಲಾಶಯದಲ್ಲಿ ಸುಮಾರು 39 ಅಡಿ ನೀರು ಹೆಚ್ಚು ಸಂಗ್ರಹವಾಗಿದೆ. ಇದು ಭದ್ರಾ ಅಚ್ಚುಕಟ್ಟು, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳ ಜನರ ಸಂತಸಕ್ಕೆ ಕಾರಣವಾಗಿದೆ. ಮಳೆ ಮುಂದುವರಿದಿದ್ದೇ ಆದಲ್ಲಿ ಇನ್ನು ಹದಿನೈದು ದಿನಗಳೊಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಜಲಾಶಯದಿಂದ ನೀರು ಬಿಡುಗಡೆಗೆ ಒತ್ತಾಯ ಮಾಡಿದ್ದು, ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿ ಕೈಗೊಂಡಿದ್ದರಿಂದ ಜುಲೈ ತಿಂಗಳ ಆರಂಭದಲ್ಲಿ ನೀರು ಹರಿಸಲು ಸಾಧ್ಯವಾಗಿಲ್ಲ, ಜಲಾಶಯದಿಂದ ಭದ್ರಾ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ನೀರು ಹರಿಸಿದರೆ ಜಲಾಶಯ ಭರ್ತಿಗೆ ಸ್ವಲ್ಪ ತಡವಾಗಬಹುದು ಅಷ್ಟೇ. ಈ ವರ್ಷ ಭದ್ರಾ ಡ್ಯಾಂ ಭರ್ತಿಯಾಗುವುದು ಖಚಿತ. ಇತಿಹಾಸದಲ್ಲೇ ಮೊದಲ ಬಾರಿಗೆ ಈ ತಿಂಗಳಲ್ಲಿ ಭರ್ತಿಯಾದರೆ ಇತಿಹಾಸ ನಿರ್ಮಾಣ ಆದಂತಾಗುತ್ತದೆ. ಮಳೆಗಾಲ ಇನ್ನೂ ಮೂರು ತಿಂಗಳು ಇದ್ದು, ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಹೊರ ಬಿಟ್ಟರೆ ಪ್ರವಾಹ ಎದುರಾಗುವುದು ಖಚಿತ.

ಭದ್ರಾ ನದಿಪಾತ್ರದ ತಗ್ಗುಪ್ರದೇಶದ ಜನರಿಗೆ ಎಚ್ಚರಿಕೆ:

ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಜಲಾಶಯದ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಸಾಕಷ್ಟು ಒಳಹರಿವು ಬರುತ್ತಿದೆ.

ನೀರಿನ ಸಂಗ್ರಹ ಮಟ್ಟವು ಹೆಚ್ಚಾಗತೊಡಗಿದೆ. ಹರಿದು ಬರುವ ಒಳಹರಿವಿನ ಪ್ರಮಾಣ ಹೆಚ್ಚಿದ್ದು, ಅಣೆಕಟ್ಟು ಸುರಕ್ಷತೆ ದೃಷ್ಠಿಯಿಂದ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಸ್ಪಿಲ್ ವೇ ಗೇಟ್ ಮುಖಾಂತರ ಬೀಡಲಾಗುವುದು.

ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕು. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ಭದ್ರಾ ಜಲಾಶಯದ ನೀರಿನ ಮಟ್ಟ

Date:09_07_2025

ಇಂದಿನ ನೀರಿನ ಮಟ್ಟ: 172.8 ಅಡಿ

ಒಳ ಹರಿವು: 15,995 ಕ್ಯೂಸೆಕ್

ಹೊರ ಹರಿವು: 3102 ಕ್ಯೂಸೆಕ್

ಕಳೆದ ವರ್ಷ ಇದೇ ದಿನ ನೀರಿನ ಮಟ್ಟ: 134.2 ಅಡಿ

ಕೆಪಾಸಿಟಿ: 23.097 ಟಿಎಂಸಿ

ಜಲಾಶಯದ ಗರಿಷ್ಠ ಮಟ್ಟ: 186 ಅಡಿ

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment