SUDDIKSHANA KANNADA NEWS/ DAVANAGERE/ DATE:15_07_2025
ದಾವಣಗೆರೆ: ಚಿಕ್ಕಮಗಳೂರು ಹಾಗೂ ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದೆ. ಭದ್ರಾ ಡ್ಯಾಂ (Bhadra Dam)ಗೆ ಬರುತ್ತಿರುವ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ. ಜಲಾಶಯ ಭರ್ತಿಗೆ ಕ್ಷಣಗಣನೆ ಶುರುವಾಗಿದೆ.
READ ALSO THIS STORY: ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ ಪ್ರೋತ್ಸಾಹ ಧನ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನ
ಭದ್ರಾ ಜಲಾಶಯಕ್ಕೆ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ಜುಲೈ ತಿಂಗಳಿನಲ್ಲಿ ಹರಿದು ಬಂದಿದೆ. ಜಲಾಶಯ ಭರ್ತಿಗೆ ಇನ್ನು ಕೇವಲ 9.6 ಅಡಿ ನೀರು ಬೇಕಿದೆ.
ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ 176.4 ಅಡಿ ಆಗಿದ್ದು, ಜಲಾಶಯಕ್ಕೆ 8022 ಕ್ಯೂಸೆಕ್ ಹರಿದು ಬರುತ್ತಿದ್ದು, ಡ್ಯಾಂನಿಂದ 3589 ಕ್ಯೂಸೆಕ್ ಹೊರ ಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ನೀರಿನ ಮಟ್ಟ 141.3 ಅಡಿ ಇತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಲಾಶಯದಲ್ಲಿ 35.1 ಅಡಿ ನೀರು ಹೆಚ್ಚು ಸಂಗ್ರಹವಿದೆ. ಇದು ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳ ರೈತರು ಹಾಗೂ ಜನರಲ್ಲಿ ಮಂದಹಾಸ ಮೂಡಿಸಿದೆ.
ಕಳೆದ ಕೆಲವು ದಿನಗಳಿಂದ ಮಳೆ ಕುಂಠಿತವಾಗಿದ್ದು, ಜಲಾಶಯಕ್ಕೆ ಬರುತ್ತಿರುವ ಒಳಹರಿವು ಕಡಿಮೆಯಾಗಿತ್ತು. ಇನ್ನು ಈ ತಿಂಗಳು ಹದಿನೈದು ದಿನಗಳಿದ್ದು, ಮಳೆ ಆರ್ಭಟಿಸಲು ಶುರು ಮಾಡಿದರೆ ಭರ್ತಿ ಖಚಿತ. ಭದ್ರಾ ಜಲಾಶಯಕ್ಕೆ ಇಷ್ಟೊಂದು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದರಿಂದ ರೈತರಲ್ಲಿ ಆಶಾಭಾವನೆ ಮೂಡಿದೆ. ಆದ್ರೆ, ವರುಣ ದೇವ ಅಬ್ಬರಿಸಿ ಬೊಬ್ಬಿರಿದರೆ ಪ್ರವಾಹದ ಭೀತಿಯೂ ಶುರುವಾಗಲಿದೆ.
ಭದ್ರಾ ಜಲಾಶಯದ ನೀರಿನ ಮಟ್ಟ
Date:15_07_2025
ಇಂದಿನ ನೀರಿನ ಮಟ್ಟ: 176.4 ಅಡಿ
ಒಳ ಹರಿವು: 8022 ಕ್ಯೂಸೆಕ್
ಹೊರ ಹರಿವು: 3589 ಕ್ಯೂಸೆಕ್
ಕಳೆದ ವರ್ಷ ಇದೇ ದಿನ ನೀರಿನ ಮಟ್ಟ: 141.3 ಅಡಿ
ಕೆಪಾಸಿಟಿ: 27.751 ಟಿಎಂಸಿ
ಜಲಾಶಯದ ಗರಿಷ್ಠ ಮಟ್ಟ: 186 ಅಡಿ