SUDDIKSHANA KANNADA NEWS/ DAVANAGERE/ DATE-05-06-2025
ದಾವಣಗೆರೆ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭದ್ರಾ ಜಲಾಶಯದಲ್ಲಿ 25.6 ಅಡಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದ ನೀರಿನ ಮಟ್ಟ 117.3 ಅಡಿ ನೀರು ಸಂಗ್ರಹವಾಗಿತ್ತು. ಈ ವರ್ಷ ಇದೇ ದಿನ 142.9 ಅಡಿ ನೀರು ಸಂಗ್ರಹವಾಗಿದೆ.
ಭದ್ರಾ ಜಲಾಶಯಕ್ಕೆ ಒಳಹರಿವು 1012 ಕ್ಯೂಸೆಕ್ ಇದ್ದರೆ, ಹೊರ ಹರಿವು 318 ಕ್ಯೂಸೆಕ್ ಇದೆ. ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗೆ ಹರಿಸುತ್ತಿದ್ದ ನೀರಿನ ಪ್ರಮಾಣವನ್ನೂ ಕಡಿಮೆಗೊಳಿಸಲಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 186 ಅಡಿ. ಇಂದು 142.9 ಅಡಿ ನೀರು ಸಂಗ್ರಹವಾಗಿದ್ದು, 143 ಅಡಿ ನೀರು ಮಧ್ಯಾಹ್ನದ ಹೊತ್ತಿಗೆ ಆಗಲಿದೆ.
ಕಳೆದ ವರ್ಷವರುಣ ಅಬ್ಬರಿಸಿ ಬೊಬ್ಬಿರಿದ ಕಾರಣ ಭದ್ರಾ ಜಲಾಶಯವು ಎರಡರಿಂದ ಮೂರು ಬಾರಿ ಭರ್ತಿಯಾಗಿತ್ತು. ಬೇಸಿಗೆ ಕಾಲ ಬಂದರೂ ಜಲಾಶಯದಲ್ಲಿ ನೀರು ಸಂಗ್ರಹವಾಗಿತ್ತು. ನಿಯಮಿತವಾಗಿ ಭದ್ರಾ ಎಡದಂಡೆ, ಬಲದಂಡೆ ನಾಲೆಗಳಲ್ಲಿ ನೀರು ಹರಿಸಿದ ಪರಿಣಾಮ ಜಲಾಶಯದ ನೀರಿನ ಸಂಗ್ರಹ ಕಡಿಮೆಯಾಗಿದೆ. ಕಳೆದ ಒಂದು ವಾರದಿಂದ ಮಳೆ ಸುರಿದ ಕಾರಣ ಜಲಾಶಯಕ್ಕೆ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಈಗ ಮತ್ತೆ ಮಳೆ ಕಡಿಮೆಯಾಗಿದ್ದು, ಜಲಾಶಯಕ್ಕೆ ಬರುತ್ತಿರುವ ನೀರಿನ ಪ್ರಮಾಣ ಕುಂಠಿತವಾಗಿದೆ.
ಭದ್ರಾ ಡ್ಯಾಂಗೆ ಬರುತ್ತಿರುವ ಒಳಹರಿವಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಕುಂಠಿತವಾಗಿದ್ದು, ಜಲಾಶಯದ ನೀರಿನ ಮಟ್ಟ 142.9 ಅಡಿಗೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬರೋಬ್ಬರಿ 25 ಅಡಿಗೂ ನೀರು ಹೆಚ್ಚು ಸಂಗ್ರಹವಾಗಿದೆ.
142.9 ಅಡಿ ನೀರು ಇರುವುದು ಭದ್ರಾ ಜಲಾನಯನ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ರೈತರು ಹಾಗೂ ಜನರ ಖುಷಿಗೂ ಕಾರಣವಾಗಿದೆ. ಮಳೆಗಾಲ ಇನ್ನೂ ಆರಂಭವಾಗಿಲ್ಲ. ಆದಾಗಲೇ ಜಲಾಶಯವು 143 ಅಡಿ ದಾಟುತ್ತಿರುವುದು ಒಳ್ಳೆಯದು ಎನ್ನುತ್ತಾರೆ ರೈತರು.
ಭದ್ರಾ ಡ್ಯಾಂಗೆ ಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಕುಂಠಿತವಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಡ್ಯಾಂಗೆ ಬರುತ್ತಿರುವ ಒಳಹರಿವು ಪ್ರಮಾಣ ಕಡಿಮೆ ಆಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮತ್ತು ಭದ್ರಾ ಜಲಾನಯನ ಪ್ರದೇಶದಲ್ಲಿ ವರುಣಾರ್ಭಟ ಕಡಿಮೆ ಆಗಿದೆ.
ಅವಧಿ ಪೂರ್ವ ಮುಂಗಾರು ಎಂಟ್ರಿ ಕೊಟ್ಟಿರುವುದರಿಂದ ಈ ಬಾರಿಯೂ ಡ್ಯಾಂ ತುಂಬುವ ನಿರೀಕ್ಷೆ ರೈತಾಪಿ ವರ್ಗದಲ್ಲಿದೆ. ಜಲಾಶಯದ ಗರಿಷ್ಠ ಮಟ್ಟ 186 ಅಡಿ. ಮಳೆ ಆಗುತ್ತಿರುವುದರಿಂದ ಭದ್ರಾ ಜಲಾನಯನ ಪ್ರದೇಶ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.