SUDDIKSHANA KANNADA NEWS/ DAVANAGERE/ DATE:26_07_2025
ದಾವಣಗೆರೆ: ಭದ್ರಾ ಡ್ಯಾಂ (Bhadra Dam) ಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು, ಅಷ್ಟೇ ಪ್ರಮಾಣದ ನೀರು ಹೊರಗಡೆ ಬಿಡಲಾಗುತ್ತಿದೆ. ಭದ್ರಾ ಜಲಾನಯನ ಮತ್ತು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಡ್ಯಾಂಗೆ 21,568 ಕ್ಯೂಸೆಕ್ ಒಳಹರಿವಿದೆ. ಇನ್ನು ಹೊರ ಹರಿವು ಇಷ್ಟೇ ಪ್ರಮಾಣದಲ್ಲಿದ್ದು, ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.
READ ALSO THIS STORY: ಭಾರೀ ಉದ್ಯೋಗ ಅವಕಾಶ: RRB ತಂತ್ರಜ್ಞರ ನೇಮಕಾತಿ 2025ರಲ್ಲಿ 6238 ಹುದ್ದೆಗಳಿಗೆ ಅರ್ಜಿ ಆಹ್ವಾನ
ಭದ್ರಾ ಡ್ಯಾಂ ಭರ್ತಿಗೆ ಇನ್ನು ಕೇವಲ 5.4 ಅಡಿ ನೀರು ಮಾತ್ರ ಬೇಕಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರಾ ಡ್ಯಾಂ ಅಧಿಕಾರಿಗಳು ಎಷ್ಟು ಒಳಹರಿವು ಬರುತ್ತಿದೆಯೋ ಅಷ್ಟೇ ಪ್ರಮಾಣದ ನೀರು ಹೊರಗಡೆ ಹರಿಸುತ್ತಿದ್ದು, ಪ್ರವಾಹದ ಭೀತಿ ಶುರುವಾಗಿದೆ. ಮಳೆ ಕುಂಠಿತವಾಗದಿದ್ದರೆ ಇನ್ನೂ ಹೆಚ್ಚಿನ ನೀರು ಜಲಾಶಯದಿಂದ ಹೊರಗಡೆ ಬಿಡಲಾಗುತ್ತಿದ್ದು, ಭದ್ರಾ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ಹರಿಸುತ್ತಿರುವ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಜಲಾಶಯದ ಇಂದಿನ ನೀರಿನ ಮಟ್ಟ 180.6 ಅಡಿ ಇದ್ದು, ಕಳೆದ ವರ್ಷ ಇದೇ ದಿನ ಭದ್ರಾ ಡ್ಯಾಂ ನೀರಿನ ಮಟ್ಟ 174.3 ಅಡಿ ಇತ್ತು. ಈ ವರ್ಷ ಆರು ಅಡಿಗಿಂತಗೂ ಹೆಚ್ಚು ಸಂಗ್ರಹವಾಗಿದ್ದು, ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಷ್ಟೇ ಪ್ರಮಾಣದಲ್ಲಿ ನೀರು ಹೊರಗಡೆ ಹರಿಸಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 186 ಅಡಿ ಇದೆ.
ಭದ್ರಾ ಡ್ಯಾಂ ಭರ್ತಿಗೆ ಕ್ಷಣಗಣನೆ ಶುರುವಾಗಿದೆ. ಡ್ಯಾಂ ಭರ್ತಿಗೆ ಇನ್ನು ಕೇವಲ 5.4 ಅಡಿ ನೀರು ಬೇಕು. ಜಲಾಶಯಕ್ಕೆ ಇಂದು 21568 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಈ ವರ್ಷವೂ ಡ್ಯಾಂ ಭರ್ತಿಯಾಗಲಿದ್ದು, ಭದ್ರಾ ಅಚ್ಚುಕಟ್ಟುದಾರ ಮತ್ತು ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳ ರೈತರು ಮತ್ತು ಜನರ ಸಂತಸಕ್ಕೆ ಕಾರಣವಾಗಿದೆ.
ಭದ್ರಾ ಡ್ಯಾಂ ಇತಿಹಾಸದಲ್ಲೇ ಮೊದಲ ಬಾರಿಗೆ ಜುಲೈ ಅಂತ್ಯದಲ್ಲೇ ಅತಿ ಹೆಚ್ಚು ನೀರು ಹರಿದು ಬಂದಿದೆ. ಜಲಾಶಯ ಭರ್ತಿಗೆ ಕೇವಲ 5.4 ಅಡಿ ನೀರು ಬರಬೇಕಷ್ಟೇ. ಹೆಚ್ಚು ಕಡಿಮೆ ಭದ್ರಾ ಡ್ಯಾಂ ತುಂಬಿದಂತೆಯೇ.
ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಜಲಾಶಯದ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಸಾಕಷ್ಟು ಒಳಹರಿವು ಬರುತ್ತಿದೆ. ನೀರಿನ ಸಂಗ್ರಹ ಮಟ್ಟವು ಹೆಚ್ಚಾಗತೊಡಗಿದೆ. ಹರಿದು ಬರುವ ಒಳಹರಿವಿನ ಪ್ರಮಾಣ 20000-25000 ಕ್ಯೂಸೆಕ್ಸ್ ಇದ್ದು, ಅಣಿಕಟ್ಟು ಸುರಕ್ಷತೆ ದೃಷ್ಠಿಯಿಂದ ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತಿದೆ.
ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕು. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ
Date:26_07_2025
ಇಂದಿನ ನೀರಿನ ಮಟ್ಟ: 180.6 ಅಡಿ
ಒಳ ಹರಿವು: 21568 ಕ್ಯೂಸೆಕ್
ಹೊರ ಹರಿವು: 21568 ಕ್ಯೂಸೆಕ್
ಕಳೆದ ವರ್ಷ ಇದೇ ದಿನ ನೀರಿನ ಮಟ್ಟ: 174.3 ಅಡಿ
ಕೆಪಾಸಿಟಿ: 57.534 ಟಿಎಂಸಿ
ಗರಿಷ್ಠ ಮಟ್ಟ: 186 ಅಡಿ