Home ದಾವಣಗೆರೆ BIG BREAKING: ಆ.18ಕ್ಕೆ ಮುಂಗಾರು ಹಂಗಾಮಿಗೆ ಭದ್ರಾ ಡ್ಯಾಂನಿಂದ ನೀರು ಬಿಡುಗಡೆ ಕುರಿತು ಸಭೆ: ದಾವಣಗೆರೆ ರೈತರ ಚಿತ್ತ ಐಸಿಸಿ ಸಭೆಯತ್ತ!
ದಾವಣಗೆರೆಬೆಂಗಳೂರು

BIG BREAKING: ಆ.18ಕ್ಕೆ ಮುಂಗಾರು ಹಂಗಾಮಿಗೆ ಭದ್ರಾ ಡ್ಯಾಂನಿಂದ ನೀರು ಬಿಡುಗಡೆ ಕುರಿತು ಸಭೆ: ದಾವಣಗೆರೆ ರೈತರ ಚಿತ್ತ ಐಸಿಸಿ ಸಭೆಯತ್ತ!

Share
ಭದ್ರಾ ಡ್ಯಾಂ
Share

ದಾವಣಗೆರೆ: ಕರ್ನಾಟಕ ನೀರಾವರಿ ನಿಗಮ ನಿಯಮಿತದ ಭದ್ರಾ ಯೋಜನೆಯ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ಭದ್ರಾ ಡ್ಯಾಂನಿಂದ ನೀರು ಹರಿಸುವ ಸಂಬಂಧ ಆ.18 ರಂದು ಸಂಜೆ 5 ಗಂಟೆಗೆ ಮಹತ್ವದ ಸಭೆಯನ್ನು ಕರೆಯಲಾಗಿದೆ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಈ 89ನೇ ಸಭೆಯು ಬೆಂಗಳೂರಿನ ವಿಕಾಸ ಸೌಧದ ಕೊಠಡಿ ಸಂಖ್ಯೆ 318ರಲ್ಲಿ ನಡೆಯಲಿದೆ.

ಸಭೆಯ ಪ್ರಮುಖ ಅಜೆಂಡಾಗಳು:

ನೀರಿನ ಸ್ಥಿತಿಗತಿ ಪರಿಶೀಲನೆ:

ಭದ್ರಾ ಜಲಾಶಯದ ಪ್ರಸ್ತುತ ನೀರಿನ ಮಟ್ಟ ಮತ್ತು ಒಳಹರಿವನ್ನು ಪರಿಶೀಲಿಸುವುದು.

ಮುಂಗಾರು ಹಂಗಾಮಿನ ನೀರು ಬಿಡುಗಡೆ:

ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ನಾಲೆಗಳ ಮೂಲಕ ನೀರು ಹರಿಸುವ ದಿನಾಂಕ ಹಾಗೂ ವೇಳಾಪಟ್ಟಿಯನ್ನು ನಿಗದಿಪಡಿಸುವುದು.

ಇತರ ವಿಷಯಗಳು: ಅಧ್ಯಕ್ಷರ ಅನುಮತಿಯೊಂದಿಗೆ ನೀರಾವರಿ ಮತ್ತು ಕುಡಿಯುವ ನೀರಿನ ನಿರ್ವಹಣೆಗೆ ಸಂಬಂಧಿಸಿದ ಇತರ ವಿಷಯಗಳ ಚರ್ಚೆ.

ಈ ಸಭೆಯಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜನಪ್ರತಿನಿಧಿ ರೈತ ಮುಖಂಡರು, ಸಂಸದರು, ಶಾಸಕರು ಹಾಗೂ ಕಾಡಾ ಮತ್ತು ನೀರಾವರಿ ನಿಗಮದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles