ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸೂರಗೊಂಡನಕೊಪ್ಪದಲ್ಲಿ ಭೋಗ್ ಸಂಭ್ರಮ ಹೇಗಿತ್ತು ಗೊತ್ತಾ…?

On: February 15, 2025 10:12 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:15-02-2025

ದಾವಣಗೆರೆ: ಹೊನ್ನಾಳಿ – ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಭೋಗ್ (ಹೋಮ) ಮತ್ತು ಪೂರ್ಣಾಹುತಿ ನೆರವೇರಿತು.

ಬಂಜಾರ ಜನಾಂಗದ ಏಕೈಕ ಜಗದ್ಗುರು ಸಂತ ಸೇವಾಲಾಲ್ ಅವರ ಜನ್ಮಸ್ಥಾನ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ 286 ನೇ ಜಯಂತ್ಯುತ್ಸವದ ಪ್ರಯುಕ್ತ ಭೋಗ್ (ಹೋಮ) ಪೂಜೆ ಮತ್ತು ಪೂರ್ಣಹುತಿ ಕಾರ್ಯಕ್ರಮದೊಂದಿಗೆ ಸಂಪನ್ನಗೊಂಡಿತು.

286ನೇ ಜಯಂತ್ಯುತ್ಸವ, ಜಾತ್ರೆ ವಿವಿಧ ಧಾರ್ಮಿಕ ಕಾರ್ಯಕ್ರಮ, ಸೇವಾಲಾಲ್ ಮತ್ತು ಮರಿಯಮ್ಮ ದೇವತೆಗಳಿಗೆ ವಿಶೇಷ ಪೂಜೆ ಕುಂಬಾಭಿಷೇಕ, ಪವಿತ್ರ ವೃಕ್ಷದ ಬಳಿ ಗುರುಗಳ ಸಮ್ಮುಖದಲ್ಲಿ ಲಕ್ಷಾಂತರ ಮಾಲಾಧಾರಿಗಳು ‘ರುದ್ರಾಕ್ಷಿ, ಜಪ ಮಾಲೆಗಳನ್ನು ವಿಸರ್ಜನೆ ಬಂಜಾರ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಶನಿವಾರ ಬೆಳಿಗ್ಗೆ ಸೇವಾಲಾಲ್ ಜನ್ಮದ ಮೂಲ ಸ್ಥಳ ಇದೀಗ ಸೇವಾಲಾಲ್ ಮತ್ತು ಮರಿಯಮ್ಮ ದೇವಿ ದೇಗುಲಗಳ ಮಧ್ಯೆ ಇರುವ ನಾಗರಕಟ್ಟೆ ಹಾಗೂ ಭೋಗ ಕಟ್ಟೆ (ಹೋಮಕುಂಡದ ) ಆವರಣಕ್ಕೆ ಅಲಂಕೃತ ಪಲ್ಲಕ್ಕಿಯಲ್ಲಿ ಮರಿಯಮ್ಮ ಮತ್ತು ಸೇವಾಲಾಲ್ ದೇಗುಲಗಳಿಂದ ಮರಿಯಮ್ಮ ಮತ್ತು ಸೇವಾಲಾಲ್ ಉತ್ಸವ ಮೂರ್ತಿಗಳನ್ನು ತರಲಾಯಿತು.

ಭೋಗಿನಲ್ಲಿ ಧಾರ್ಮಿಕ ವಿಧಿ ವಿಧಾನ, ಸೇವಾಲಾಲರ ಜನ್ಮದಿನದಂದು ವಿಶೇಷವಾಗಿ ಆಚರಿಸುವ ಬಂಜಾರ ಜನಾಂಗದ ಧಾರ್ಮಿಕ ಸಂಸ್ಕೃತಿಯ ವೈಭವ. ಮಾಲಾಧಾರಿಗಳು ಬಿಳಿ ಬಟ್ಟೆ ರುದ್ರಾಕ್ಷಿ ಸೇರಿದಂತೆ ಇತರೆ ಧರಿಸಿ 21 ದಿನ 11 ಮತ್ತು 5 ನೇ ದಿನ ಕಾಲ ವ್ರತ ಕೈಗೊಂಡ ಸೇವಾಲಾಲ್ ಮಾಲಾಧಾರಿಗಳು ಇಡುಗಂಟನ್ನು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸೇವಾಲಾಲ್ ದೇಗುಲದ ಸೇವ್ಯಾನಾಯ್ಕ, ಮತ್ತು ಮರಿಯಮ್ಮ ದೇಗುಲದ ಆರ್ಚಕ ಮಂಜುನಾಥನಾಯ್ಕ , ಪೌರೋಹಿತ್ಯದಲ್ಲಿ ಲೋಕಕಲ್ಯಾಣಾರ್ಥವಾಗಿ ಪ್ರಾರ್ಥನೆ ಸಲ್ಲಿಸಿ ಮಹಾಭೋಗ್‌ನಲ್ಲಿ ಅರ್ಪಿಸಿದರು.

ಲಿಂಗಸೂಗೂರ ಸಿದ್ದಲಿಂಗ ಸ್ವಾಮೀಜಿ , ಕೊಡಗಲಿ ಶಂಕರ ಮಹಾರಾಜ್. ತಿಪ್ಪೇಸ್ವಾಮಿ ಮಹಾರಾಜ್ , ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಅಧ್ಯಕ್ಷ , ವಿಧಾನಸಭೆಯ ಉಪಸಭಾಪತಿ, ರುದ್ರಪ್ಪ ಮಾನಪ್ಪ ಲಮಾಣಿ, ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಎನ್. ಜಯದೇವ ನಾಯ್ಕ್ , ಪ್ರಧಾನ ಕಾರ್ಯದರ್ಶಿ ಎನ್.ಅರುಣಕುಮಾರ, ಪ್ರಧಾನ ಧರ್ಮದರ್ಶಿ ಬಿ.ಹೀರಾನಾಯ್ಕ ಮತ್ತು ಭೋಜ್ಯನಾಯ್ಕ, ಮಹಾಮಠ ನಿರ್ವಹಣಾ ಸಮಿತಿ ಅಧ್ಯಕ್ಷ ಹನುಮಂತನಾಯ್ಕ, ಕರ್ನಾಟಕ ತಾಂಡ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎನ್.ರಾಜು , ರಾಘವೇಂದ್ರನಾಯ್ಕ, ಚಂದ್ರಸೇನಾ ಚವ್ಹಾಣ್, ಎಸ್.ಎನ್.ಗೋಪಾಲನಾಯ್ಕ, ಭೋಜ್ಯನಾಯ್ಕ, ಭೂಪಾಲನಾಯ್ಕ, ಶ್ರೀನಿವಾಸನಾಯ್ಕ, ರೇಣುನಾಯ್ಕ, ರಾಮನಾಯ್ಕ, ಹೊನ್ನಾಳಿ ಉಪವಿಭಾಗದ ಉಪವಿಭಾಗಾಧಿಕಾರಿ ವಿ.ಅಭಿಷೇಕ , ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ, ಪಿಐ ಎನ್.ಎಸ್.ರವಿ, ಯೋಜನ ನಿರ್ದೇಶಕ ಹರೀಶ್ ನಾಯ್ಕ, ವಾಗೀಶ್ ಲಮಾಣಿ, ಮಾರುತಿ ನಾಯ್ಕ, ಸುರೇಂದ್ರ ನಾಯ್ಕ ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment