SUDDIKSHANA KANNADA NEWS/ DAVANAGERE/ DATE:15-01-2025
ನವದೆಹಲಿ: UPSC ವಂಚನೆ ಪ್ರಕರಣದಲ್ಲಿ ಮಾಜಿ ಐಎಎಸ್ ಪೂಜಾ ಖೇಡ್ಕರ್ ಗೆ ಬಿಗ್ ರಿಲೀಫ್ ಸಿಕ್ಕಿದೆ.
ಕೂಡಲೇ ಬಂಧಿಸದಂತೆ ಸುಪ್ರೀಂ ಕೋರ್ಟ್ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಗೆ ವಿನಾಯಿತಿ ನೀಡಿದೆ.
ಮುಂದಿನ ವಿಚಾರಣೆಯವರೆಗೆ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಬಂಧನ ಮಾಡದಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಿದೆ.
ಯುಪಿಎಸ್ ಸಿ ಪರೀಕ್ಷೆಯಲ್ಲಿ ವಂಚಿಸಿ ಐಎಎಸ್ ಅಧಿಕಾರಿಯಾದ ಆರೋಪ ಎದುರಿಸುತ್ತಿದ್ದ ಪೂಜಾ ಖೇಡ್ಕರ್ ಅವರಿಗೆ ಬಂಧನ ಭೀತಿ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧಿಸದಂತೆ ಆದೇಶಿಸುವಂತೆ ಪೂಜಾ ಖೇಡ್ಕರ್ ಪರ ವಕೀಲರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.