Home ಕ್ರೈಂ ನ್ಯೂಸ್ ‘ದಲಿತ, ಹಿಂದುಳಿದ ನಾಯಕರನ್ನು ಗುರಿ ಮಾಡುತ್ತಿದೆ ಬಿಜೆಪಿ’: ಸತೀಶ್ ಜಾರಕಿಹೊಳಿ ಪರ ಬಿ.ಕೆ. ಹರಿಪ್ರಸಾದ್ ಬ್ಯಾಟಿಂಗ್
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

‘ದಲಿತ, ಹಿಂದುಳಿದ ನಾಯಕರನ್ನು ಗುರಿ ಮಾಡುತ್ತಿದೆ ಬಿಜೆಪಿ’: ಸತೀಶ್ ಜಾರಕಿಹೊಳಿ ಪರ ಬಿ.ಕೆ. ಹರಿಪ್ರಸಾದ್ ಬ್ಯಾಟಿಂಗ್

Share
ಸತೀಶ್ ಜಾರಕಿಹೊಳಿ
Share

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ನಡೆದಿರುವ ಜಾರಿ ನಿರ್ದೇಶನಾಲಯದ (ED) ದಾಳಿಯು ಕೇವಲ ವೈಯಕ್ತಿಕ ದಾಳಿಯಲ್ಲ, ಬದಲಿಗೆ ಇದು ದೇಶದ ಸಂವಿಧಾನ ಮತ್ತು ಕಾಂಗ್ರೆಸ್ ಪಕ್ಷದ ಮೇಲೆಯೇ ನಡೆದ ದಾಳಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಖಂಡಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ವಿರೋಧಿಸಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ದಲಿತರು, ಶೂದ್ರರು ಮತ್ತು ದುರ್ಬಲ ವರ್ಗದವರು ರಾಜಕೀಯವಾಗಿ ಹಾಗೂ ಸಾರ್ವಜನಿಕ ಜೀವನದಲ್ಲಿ ಶಕ್ತಿಯುತವಾಗಿ ಬೆಳೆಯುವುದನ್ನು ಸಹಿಸದ ಶಕ್ತಿಗಳು ಇಂತಹ ತೊಂದರೆಗಳನ್ನು ಕೊಡುತ್ತಿವೆ. ಬುದ್ಧ, ಬಸವಣ್ಣ ಮತ್ತು ಏಸುಕ್ರಿಸ್ತರ ಕಾಲದಿಂದಲೂ ಸುಧಾರಣೆ ತರಲು ಹೊರಟವರಿಗೆ ಇಂತಹ ತೊಂದರೆಗಳು ಎದುರಾಗುತ್ತಲೇ ಇವೆ” ಎಂದು ಹೇಳಿದರು.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹರಿಪ್ರಸಾದ್, “ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇಡಿ, ಐಟಿ ಮತ್ತು ಸಿಬಿಐ ಸಂಸ್ಥೆಗಳನ್ನು ಬೆದರಿಕೆಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ವಿಪಕ್ಷ ನಾಯಕರನ್ನು ಹೆದರಿಸಿ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಸಂಪ್ರದಾಯವನ್ನು ಮುಂದುವರಿಸಿದೆ” ಎಂದು ಆರೋಪಿಸಿದರು.

“ನಮ್ಮ ನಾಯಕರಾದ ರಾಹುಲ್ ಗಾಂಧಿಯವರನ್ನು 52 ಗಂಟೆಗೂ ಹೆಚ್ಚು ಕಾಲ ತನಿಖೆ ನಡೆಸಿದರೂ ಅವರಿಗೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ಮತ್ತು ಇಡೀ ಪಕ್ಷ ಸತೀಶ್ ಜಾರಕಿಹೊಳಿ ಅವರ ಬೆನ್ನಿಗೆ ಗಟ್ಟಿಯಾಗಿ ನಿಂತಿದೆ. ಯಾವುದೇ ಕಾರಣಕ್ಕೂ ಸತೀಶ್ ಜಾರಕಿಹೊಳಿ ಅವರು ಒಂಟಿಯಲ್ಲ, ಈ ರಾಜಕೀಯ ದಾಳಿಗಳ ವಿರುದ್ಧ ನಾವು ಒಗ್ಗಟ್ಟಿನಿಂದ ಹೋರಾಡಲಿದ್ದೇವೆ” ಎಂದು ಭರವಸೆ ನೀಡಿದರು.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles