ಬೆಂಗಳೂರು: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ನನ್ನು “ದೇಶಭಕ್ತ” (ನ್ಯಾಷನಲಿಸ್ಟ್) ಎಂದು ಕರೆದಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನವನ್ನು ಎಬಿವಿಪಿ ವಿರೋಧಿಸಿದ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಬಿ.ಕೆ. ಹರಿಪ್ರಸಾದ್, “ಉಮರ್ ಖಾಲಿದ್ ಒಬ್ಬ ದೇಶಭಕ್ತ” ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆಯನ್ನು ಕಟುವಾಗಿ ಖಂಡಿಸಿರುವ ಬಿಜೆಪಿ, “ಭಾರತದ ವಿರುದ್ಧ ಮತ್ತು ದೇಶವನ್ನು ತುಂಡು ಮಾಡುವ ಘೋಷಣೆಗಳನ್ನು ಕೂಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ದೇಶಭಕ್ತ ಎಂದು ಕರೆಯುವುದು ಪ್ರತಿಯೊಬ್ಬ ದೇಶಪ್ರೇಮಿ ಭಾರತೀಯನಿಗೆ ಹಾಗೂ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರಿಗೆ ಎಸಗಿದ ಘೋರ ಅಪಮಾನ” ಎಂದು ಕಿಡಿಕಾರಿದೆ.
ದೇಶದ ಅಖಂಡತೆ ಮತ್ತು ಸಾರ್ವಭೌಮತ್ವದ ವಿರುದ್ಧ ಮಾತನಾಡುವವರನ್ನು ಬೆಂಬಲಿಸುವುದೇ ಕಾಂಗ್ರೆಸ್ನ ದೇಶಭಕ್ತಿಯ ಹೊಸ ವ್ಯಾಖ್ಯಾನವೇ ಎಂದು ಪ್ರಶ್ನಿಸಿರುವ ವಿಜಯೇಂದ್ರ, ಬಿ.ಕೆ. ಹರಿಪ್ರಸಾದ್ ಅವರು ದೇಶದ ಜನತೆಯಲ್ಲಿ ತಕ್ಷಣವೇ ಬಹಿರಂಗವಾಗಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.





Leave a comment