ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಮೇಶ್ವರ ಕಫೆಯಲ್ಲಿ ಸ್ಪೋಟ ಸಣ್ಣ ಪ್ರಮಾಣದ ಸುಧಾರಿತ ಸ್ಫೋಟಕ, ತನಿಖೆ ತೀವ್ರ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

On: March 1, 2024 6:43 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-03-2024

ಮೈಸೂರು: ಬೆಂಗಳೂರಿನ ರಾಮೇಶ್ವರ ಕಫೆಯಲ್ಲಿ ನಡೆದಿರುವ ಸ್ಪೋಟ ಘಟನೆಯ ತನಿಖೆ ತೀವ್ರವಾಗಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಾಥಮಿಕ ತನಿಖೆಯ ಪ್ರಕಾರ ಅದು ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿತ್ತು ಎಂದು ತಿಳಿದುಬಂದಿದೆ, ಪೂರ್ಣ ವರದಿಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.

ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ ಎಂದರು. ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಎಲ್ಲರೂ ಪ್ರಾಣಾಪಾಯದಿಂದ
ಪಾರಾಗಿದ್ದಾರೆ. ಸಿಸಿ ಟಿವಿ ಕ್ಯಾಮರಾ ಪರೀಕ್ಷಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಗೃಹ ಸಚಿವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಲಾಗಿದೆ. ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ಸ್ಪಷ್ಟ ಮಾಹಿತಿ ದೊರೆಯಲಿದೆ
ಎಂದರು.

ಕಠಿಣ ಕ್ರಮ

ರಾಜ್ಯದಲ್ಲಿ ಇಂಥದ್ದು ನಡೆಯಬಾರದಿತ್ತು. ಮಂಗಳೂರಿನಲ್ಲಿ ಆಗಿದ್ದು ಬಿಟ್ಟರೆ ಪುನ: ಇಂಥ ಘಟನೆ ಸಂಭವಿಸಿದೆ. ಯಾರು ಇದನ್ನು ಮಾಡಿದ್ದಾರೆ ಎಂದು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜಕಾರಣ ಮಾಡಬಾರದು

ವಿರೋಧ ಪಕ್ಷಗಳು ಈ ವಿಷಯಗಳ ಬಗ್ಗೆ ರಾಜಕಾರಣ ಮಾಡಬಾರದು. ಎಲ್ಲರೂ ಸಹಕರಿಸಬೇಕು ಎಂದರು. ಪೋಲಿಸರೊಂದಿಗೆ ಮಾತನಾಡಿದ್ದು, ಸದ್ಯದಲ್ಲಿಯೇ ಪೂರ್ಣ ಚಿತ್ರಣ ಸಿಗಲಿದೆ. ವಿಚಾರಣೆ ತ್ವರಿತಗತಿಯಲ್ಲಿ
ನಡೆದಿದೆ ಎಂದರು ಹೇಳಿದರು.

ದೇಶದಲ್ಲಿ ಶೇ.5 ರಷ್ಟು ಮಾತ್ರ ಬಡತನ:ಪರಿಶೀಲನೆ ಅಗತ್ಯ

ನೀತಿ ಆಯೋಗದವರು ನೀಡಿರುವ ವರದಿ ಪ್ರಕಾರ ಕಳೆದ 10 ವರ್ಷಗಳಲ್ಲಿ ಬಡತನ ಶೇ 5ರಷ್ಟು ಮಾತ್ರ ಇದೆ ಎಂದು ಹೇಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಅದನ್ನು ಪರಿಶೀಲಿಸಬೇಕಿದೆ. ಅದು ಸಮೀಕ್ಷೆಯ ವರದಿಯಲ್ಲ.
ಅವರು ಹೇಳಿರುವುದು ಸತ್ಯವೋ ಅಸತ್ಯವೋ ಎಂದು ತಿಳಿಯಬೇಕಿದೆ. ಬಡತನ 5% ಕಡಿಮೆಯಾಗಿದ್ದರೆ ಅದು ಖುಷಿ ಪಡುವ ವಿಚಾರ. ಪರಿಸ್ಥಿತಿ ನೋಡಿದರೆ ಆ ರೀತಿ ಕಾಣುವುದಿಲ್ಲ. ಬಡತನ ರೇಖೆಗಿಂತ ಕೆಳಗಿರುವ 82
ಕೋಟಿ ಕುಟುಂಬಗಳಿಗೆ ಅಕ್ಕಿ ಕೊಡಲಾಗುತ್ತಿದೆ ಎಂದು ವಿವರಿಸಿದರು.

ಬಿಜೆಪಿ 50 ಕೋಟಿ ಆಮಿಷ ಒಡ್ಡುತ್ತಿದೆ

ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶವನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ಎಂದಿಗೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿಯೇ ಬಂದಿದ್ದಾರೆ. 113 ಕ್ಕಿಂತ ಹೆಚ್ಚು ಗೆದ್ದೇ ಇಲ್ಲ. 2018 ರಲ್ಲಿ 100 ಗೆದ್ದಿದ್ದರು. ಕರ್ನಾಟಕದಲ್ಲಿಯೂ ಆಪರೇಷನ್ ಕಮಲ ಪ್ರಯತ್ನ ಮಾಡುತ್ತಾರೆ. ಆದರೆ ನಮ್ಮ ಶಾಸಕರು ಅವರ ಆಸೆ ಆಮಿಷಗಳಿಗೆ ಬಲಿಯಾಗುವುದಿಲ್ಲ. ಅವರು ಈಗ 50 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು ತಿಳಿಸಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment