ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬಿಪಿಎಲ್ ಕಾರ್ಡ್‌ ಹೊಂದಿರುವವರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ

On: August 22, 2024 2:16 PM
Follow Us:
---Advertisement---

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿ ವಿತರಣೆ ಕುರಿತು ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಮತ್ತೊಂದು ಗುಡ್‌ನ್ಯೂಸ್ ನೀಡಿದೆ.

ಬಿಪಿಎಲ್ ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತೀಯ ಆಹಾರ ನಿಗಮ (ಎಫ್‌ಸಿಐ) ಈ ಬಗ್ಗೆ ಘೋಷಣೆ ಮಾಡಿದೆ. ಹೀಗಾಗಿ ಫಲಾನುಭವಿಗಳಿಗೆ ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ಹೆಚ್ಚು ಸಿಗಲಿದೆ. ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ಕಳೆದ ವರ್ಷ ತಿರಸ್ಕರಿಸಿತ್ತು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ವಾಕ್ಸಮರಕ್ಕೆ ಕೂಡಾ ಕಾರಣವಾಗಿತ್ತು.

ಆದರೆ, ಇದೀಗ ಕೇಂದ್ರ ಸರ್ಕಾರ ನಿರ್ಧಾರ ಬದಲಾಯಿಸಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಗಾಗಿ 2.38 ಲಕ್ಷ ಟನ್ ಅಕ್ಕಿಯನ್ನು ಪೂರೈಸಲು ಮನವಿ ಮಾಡಿದೆ. ಅದನ್ನು ಪೂರೈಸಲು ನಾವು ಸಿದ್ಧರಿದ್ದೇವೆ ಎಂದು ಎಫ್‌ಸಿಐನ ಬೆಂಗಳೂರಿನ ಪ್ರಾದೇಶಿಕ ಕಚೇರಿಯ ಪ್ರಧಾನ ವ್ಯವಸ್ಥಾಪಕ ಮಹೇಶ್ವರಪ್ಪ ಬಿಒ ತಿಳಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment