ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಂತ್ಯೋದಯ, ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ!

On: March 13, 2025 10:31 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:13-03-2025

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಅಂತ್ಯೋದಯ ಅನ್ನಭಾಗ್ಯ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಪಡಿತರ ಚೀಟಿಯ ಕುಟುಂಬ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಅಕ್ಕಿ ಹಣವನ್ನು ವರ್ಗಾಯಿಸುವ ಪ್ರಕ್ರಿಯೆ ಬದಲಾಗಿ 2025 ರ ಫೆಬ್ರವರಿ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿ ವಿತರಣೆ ಮಾಡಲು ಆದೇಶಿಸಲಾಗಿದೆ.

ವಿತರಣೆ ಪ್ರಮಾಣ : ಅಂತ್ಯೋದಯ ಪಡಿತರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ. ಅಕ್ಕಿ. 4 ಸದಸ್ಯರಿರುವ ಕಾರ್ಡಿಗೆ 45 ಕೆ.ಜಿ. ಅಕ್ಕಿ, 5 ಸದಸ್ಯರರಿರುವ ಕಾರ್ಡಿಗೆ 65 ಕೆ.ಜಿ. ಅಕ್ಕಿ, 6 ಸದಸ್ಯರಿರುವ ಕಾರ್ಡಿಗೆ 85 ಕೆ.ಜಿ. ಅಕ್ಕಿ, 7 ಸದಸ್ಯರಿರುವ ಕಾರ್ಡುದಾರರಿಗೆ 105 ಕೆ.ಜಿ ಅಕ್ಕಿ ,8 ಸದಸ್ಯರಿರುವ ಕಾರ್ಡಿಗೆ 125 ಕೆ.ಜಿ. ಅಕ್ಕಿ, 9 ಸದಸ್ಯರಿರುವ ಕಾರ್ಡಿಗೆ 145 ಕೆ.ಜಿ. ಅಕ್ಕಿ, 10 ಸದಸ್ಯರಿರುವ ಕಾರ್ಡಿಗೆ 165 ಕೆ.ಜಿ. ಅಕ್ಕಿ, 11 ಸದಸ್ಯರಿರುವ ಕಾರ್ಡಿಗೆ 185 ಕೆ.ಜಿ. ಅಕ್ಕಿ, 12 ಸದಸ್ಯರಿರುವ ಕಾರ್ಡಿಗೆ 205 ಕೆಜಿ. ಅಕ್ಕಿಯನ್ನು ಹಾಗೂ ಆದ್ಯತಾ ಪಡಿತರ(ಪಿಪಿಹೆಚ್/ಬಿಪಿಎಲ್) ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರಿಗೆ 15 ಕೆ.ಜಿ. ಅಕ್ಕಿಯನ್ನು ಕೊಡಲಾಗುತ್ತದೆ.

ಪಡಿತರ ಚೀಟಿದಾರರು ಮಾರ್ಚ್ ತಿಂಗಳ ಅಂತ್ಯದವರೆಗೆ ತಮ್ಮ ವ್ಯಾಪ್ತಿಯ ನ್ಯಾಯ ಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ಕೊಟ್ಟು ರಶೀದಿ ಪಡೆದು ಉಚಿತವಾಗಿ ಆಹಾರಧಾನ್ಯವನ್ನು ಪಡೆದುಕೊಳ್ಳಬಹುದಾಗಿದೆ. ಒಂದು ವೇಳೆ ನ್ಯಾಯ ಬೆಲೆ ಅಂಗಡಿಯವರು ಕಡಿಮೆ ಪ್ರಮಾಣದಲ್ಲಿ ಅಕ್ಕಿಯನ್ನು ವಿತರಿಸಿದಲ್ಲಿ. ಟೋಲ್‌ಫ್ರೀ ಸಂ.1967, ಆಹಾರ ನಿರೀಕ್ಷಕರ ಮೊ.ಸಂ. 9611195920 ಗೆ ದೂರು ಸಲ್ಲಿಸಬಹುದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಅನೌಪಚಾರಿಕ ಪಡಿತರ ಪ್ರದೇಶ ಭದ್ರಾವತಿಯ ಸಹಾಯಕ ನಿರ್ದೇಶಕರು(ಪ್ರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment