SUDDIKSHANA KANNADA NEWS/ DAVANAGERE/ DATE:15-01-2025
ದಾವಣಗೆರೆ: ಮನೆಯಲ್ಲಿ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರ ಗ್ರಾಮಾಂತರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ಕೆ. ಜಿ. ಹಳ್ಳಿಯ ಸೂಫಿಯಾನ್ ಷರೀಫ್ ಮುಬಾರಕ್ ಮತ್ತು ಬೆಂಗಳೂರಿನ ರಾಜಗೋಪಾಲ್ ನಗರದ ಜಾವಿದ್ ಬಂಧಿತ ಆರೋಪಿಗಳು. ಹರಿಹರ ನಗರದ ಹೊರವಲಯದ ಅಮರಾವತಿ ಕಾಲೋನಿಯ ಲೋಹಿತ್ ಡಿಸೋಜಾ ಅವರ ಮನೆಯಲ್ಲಿ ಕಳೆದ ನಾಲ್ಕು ತಿಂಗಳ ಹಿಂದೆ ಕಳ್ಳತನ ನಡೆದಿತ್ತು. ಈ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಬೇಧಿಸಿರುವ ಹರಿಹರ ಗ್ರಾಮಾಂತರ ಪೊಲೀಸರು ಬಂಧಿತ ಆರೋಪಿಗಳಿಂದ ಬಂಗಾರದ ಆಭರಣ, 1.6 ಕೆಜಿ ಬೆಳ್ಳಿಯ ಸಾಮಗ್ರಿಗಳು, ಟಿ.ವಿ., 2 ಬೈಕ್ ಹಾಗೂ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪತ್ತೆ ಹಚ್ಚಿ ಚಿನ್ನಾಭರಣ ವಶಪಡಿಸಿಕೊಂಡ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅವರನ್ನು ಎಸ್ಪಿ ಉಮಾ ಪ್ರಶಾಂತ್ ಅವರು ಅಭಿನಂದಿಸಿದ್ದಾರೆ.