ಲೋಕಸಭಾ ಚುನಾವಣೆ ನಡೆದ ಬಳಿಕ ನಡೆಯುತ್ತಿರುವ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಮೇಲುಗೈ ಸಾಧಿಸಿದೆ.
ವಿಧಾನಸಭೆ ಉಪಚುನಾವಣೆಯಲ್ಲಿ ಉತ್ತರಾಖಂಡದ ಆಡಳಿ ಪಕ್ಷ ಬಿಜೆಪಿ ಭಾರಿ ಮುಖಭಂಗ ಅನುಭವಿಸಿದೆ.
ಹಿಂದೂಗಳ ಪುಣ್ಯ ಕ್ಷೇತ್ರಗಳೆಂದು ಪರಿಗಣಿಸಲಾದ ಬದ್ರಿನಾಥ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಇಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಲಖಪತ್ ಸಿಂಗ್ ಬುಟೋಲಾ ಅವರು ಗೆಲುವು ಸಾಧಿಸಿದ್ದಾರೆ