ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

On: October 28, 2025 6:09 PM
Follow Us:
ಅರ್ಜಿ
---Advertisement---

SUDDIKSHANA KANNADA NEWS/DAVANAGERE/DATE:28_10_2025

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಬಹುದಾಗಿದೆ.

READ ALSO THIS STORY: 70 ವರ್ಷದ ಹಿಂದಿನ ಪೊಲೀಸ್ ಕ್ಯಾಪ್ ಬದಲು, ಪೀಕ್ ಕ್ಯಾಪ್ ಮಾದರಿ ಆಯ್ಕೆ ಮಾಡಿದ್ದೇ ಸಿಎಂ ಸಿದ್ದರಾಮಯ್ಯರಂತೆ!

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳು ಈ ಕೆಳಕಂಡಂತೆ ದತ್ತಿನಿದಿ ಪ್ರಶಸ್ತಿಗಳನ್ನು ಸ್ಥಾಪಿಸಿವೆ: ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಅಭಿಮಾನಿ ಪ್ರಶಸ್ತಿ”, ಮೈಸೂರಿನ “ಮೈಸೂರು ದಿಗಂತ” ಪತ್ರಿಕಾ ಸಂಸ್ಥೆಯು “‘ಮಾನವೀಯ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ”, ಬೆಂಗಳೂರಿನ ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ಅಂಕಣ/ಸಂಪಾದಕೀಯ/ಪರಿಣಾಮಕಾರಿ ವರದಿಗೆ “ಅಭಿಮನ್ಯು ಪ್ರಶಸ್ತಿ”, ಬೆಂಗಳೂರಿನ “ಪ್ರಜಾ ಸಂದೇಶ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ
ಲೇಖನಕ್ಕೆ : ಪ್ರಜಾ ಸಂದೇಶ ದತ್ತಿ ಪ್ರಶಸ್ತಿ”ಗಳನ್ನು ಸ್ಥಾಪಿಸಿವೆ. ಈ ದತ್ತಿ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ ನಗದು ಬಹುಮಾನ ಒಳಗೊಂಡಿವೆ.

ಈ ಪ್ರಶಸ್ತಿಗಳಿಗೆ ಆಸಕ್ತ ಪತ್ರಕರ್ತರು 01-01-2025 ರಿಂದ 25-10-2025ರ ವರೆಗೆ ಪ್ರಕಟವಾಗಿರುವ ತಮ್ಮ ಒಂದು ಲೇಖನ-ವರದಿಯನ್ನು ಕಳುಹಿಸಬಹುದು.

ಕನ್ನಡ ದೈನಿಕ-ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಹೆಸರು (ಬೈಲೈನ್) ಬರೆದಿರುವ ವರದಿ ಲೇಖನಿಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ. ಲೇಖನ-ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬAಧಿಸಿದ ಪತ್ರಿಕೆಯ ಸಂಪಾದಕರಿAದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು.

ಲೇಖನ ವರದಿಗಳ ಲಕೋಟೆಯಲ್ಲಿ ಯಾವ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುತ್ತಿರುವುದು ಎಂಬುದನ್ನು ‘ಅಭಿಮಾನಿ ಪ್ರಶಸ್ತಿ- 2025’ , ‘ಮೈಸೂರು ದಿಗಂತ ಪ್ರಶಸ್ತಿ-2025’, “ಅಭಿಮನ್ಯು ಪ್ರಶಸ್ತಿ-2025” ಹಾಗೂ “ಪ್ರಜಾ ಸಂದೇಶ ದತ್ತಿ ಪ್ರಶಸ್ತಿ-2025” ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಇದೇ 12-11-2025 ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ ಡಾ.ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-560001. ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು ಎಂದು ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment