ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಪಘಾತದಲ್ಲಿ ಹೆಲ್ಮೆಟ್ ಧರಿಸಿದ್ದರೂ ದಾವಣಗೆರೆ ಆರ್ ಟಿಓ ಕಚೇರಿ ಅಧೀಕ್ಷಕ ಸಾವು: ಸಿಸಿಟಿವಿಯಲ್ಲಿ “ಭಯಾನಕ ದೃಶ್ಯ” ಸೆರೆ!

On: August 8, 2025 6:25 PM
Follow Us:
Davanagere
---Advertisement---

SUDDIKSHANA KANNADA NEWS/ DAVANAGERE/DATE:08_08_2025

ದಾವಣಗೆರೆ: ದಾವಣಗೆರೆ ನಗರದ ರಿಂಗ್ ರಸ್ತೆಯ ಎಜು ಏಷ್ಯಾ ಸ್ಕೂಲ್ ಸಮೀಪ ಕೆಎಸ್ಆರ್ ಟಿ ಸಿ ಬಸ್ ಚಕ್ರಕ್ಕೆ ಸಿಲುಕಿ ಆರ್ ಟಿ ಒ ಕಚೇರಿ ಅಧೀಕ್ಷಕರು ಸಾವನ್ನಪ್ಪಿದ ಕ್ಷಣ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಭಯಾನಕ ಅಪಘಾತದ ವಿಡಿಯೋ ಇಲ್ಲಿದೆ ನೋಡಿ

 

READ ALSO THIS STORY: BIG NEWS: ಹೊಂಡಾ ಆಕ್ಟೀವಾಗೆ ಬಸ್ ಡಿಕ್ಕಿ: ದಾವಣಗೆರೆ ಆರ್ ಟಿ ಒ ಕಚೇರಿ ಅಧೀಕ್ಷಕ ಸಾವು

ಬೆಳಿಗ್ಗೆ 9.30ರ ಸುಮಾರಿನಲ್ಲಿ ಜೆ. ಹೆಚ್. ಪಟೇಲ್ ಬಡಾವಣೆಯಿಂದ ಆರ್ ಟಿ ಒ ಕಚೇರಿಗೆ ಅಧೀಕ್ಷಕ ತಿಪ್ಪೇಶಪ್ಪ(41) ಹೊಂಡಾ ಆಕ್ಟೀವಾದಲ್ಲಿ ತೆರಳುತ್ತಿದ್ದರು. ಮುಂದೆ ಸಾಗುತ್ತಿದ್ದ ತಿಪ್ಪೇಶಪ್ಪ ಅವರ ಬೈಕ್ ಗೆ ಬಸ್ ತಾಗಿದೆ. ಆನಂತರ ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ತಲೆ ಸಿಲುಕಿಕೊಂಡಿದ್ದರಿಂದ ಹೆಲ್ಮೆಟ್ ಹಾಕಿದ್ದರೂ ದಾರುಣವಾಗಿ ಸಾವು ಕಂಡಿದ್ದಾರೆ.

 

ಅಪಘಾತಕ್ಕೂ ಮುನ್ನ ಬೈಕ್ ಗಳು ಮುಂದೆ ಸಾಗುವುದು ಕಂಡು ಬರುತ್ತದೆ. ಇನ್ನು ಕಚೇರಿಗೆ ತೆರಳುತ್ತಿದ್ದ ತಿಪ್ಪೇಶಪ್ಪ ಅವರು ಬೈಕ್ ನಲ್ಲಿ ಹೋಗುತ್ತಿದ್ದರು. ಆಗ ಹಿಂದೆಗಡೆಯಿಂದ ಬಂದ ಕೆಎಸ್ ಆರ್ ಟಿ ಸಿ ಬಸ್ ಬೈಕ್ ಗೆ ತಾಗಿದ್ದು, ಈ ವೇಳೆ ಗಲಿಬಿಲಿಯಾದ ತಿಪ್ಪೇಶಪ್ಪ ಅವರು ತಪ್ಪಿಸಿಕೊಳ್ಳುವ ಭರದಲ್ಲಿ ಕೆಳಗಡೆ ಬಿದ್ದಿದ್ದಾರೆ. ಈ ವೇಳೆ ಬಸ್ ವೇಗವಾಗಿದ್ದ ಕಾರಣ ಬಸ್ ಚಕ್ರಕ್ಕೆ ಸಿಲುಕಿ ತಲೆ ಅಪ್ಪಚ್ಚಿಯಾಗಿದೆ.

ಪಿ. ತಿಪ್ಪೇಶಪ್ಪ ಮೃತಪಟ್ಟ ಆರ್ ಟಿ ಒ ಕಚೇರಿ ಅಧೀಕ್ಷಕರು. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು, ಸಂಬಂಧಿಕರು, ಸ್ನೇಹಿತರು ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಕುಟುಂಬಸ್ಥರ ಆಕ್ರಂದನ
ಮುಗಿಲು ಮುಟ್ಟಿದೆ. ವರಮಹಾಲಕ್ಷ್ಮಿ ಹಬ್ಬದ ದಿನವೇ ಮನೆಯಲ್ಲಿ ಸೂತಕ ಮೂಡಿಸಿದೆ.

ಡಿಸಿ ಭೇಟಿ:

ಸ್ಥಳಕ್ಕೆ ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಭೇಟಿ ನೀಡಿದರು. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಪಾಕಿಸ್ತಾನ

ಪಾಕಿಸ್ತಾನ ಕದನ ವಿರಾಮ ತಿರಸ್ಕರಿಸಿ ಮರ್ಮಾಘಾತ ನೀಡಿದ ಅಫ್ಘಾನಿಸ್ತಾನ: ರಕ್ಷಣಾ ಸಚಿವ, ಐಎಸ್‌ಐ ಮುಖ್ಯಸ್ಥರಿಗೆ ವೀಸಾ ನಿರಾಕರಣೆ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

Leave a Comment