ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಹೆಚ್ಚುತ್ತಿದೆ ಬಿಸಿಲ ಧಗೆ: ಮಕ್ಕಳ ಹಿತದೃಷ್ಟಿಯಿಂದ ಎಲ್ಲಾ ಶಾಲೆ, ಅಂಗನವಾಡಿಗಳಿಗೆ ನೀರಿನ ಸಂಪರ್ಕ ಕಡ್ಡಾಯಕ್ಕೆ ಸಿಇಓ ಕಟ್ಟಾಜ್ಞೆ..!

On: February 26, 2024 7:16 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:26-02-2024

ದಾವಣಗೆರೆ: ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳು ಹಾಗೂ ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೀರಿನ ಸಂಪರ್ಕ ಕಡ್ಡಾಯವಾಗಿ ಕಲ್ಪಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಅಧ್ಯಕ್ಷರಾದ ಸುರೇಶ್ ಇಟ್ನಾಳ್ ಸೂಚನೆ ನೀಡಿದರು.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆಲವೊಮ್ಮೆ ಕಲುಷಿತ ನೀರು ಪೂರೈಕೆ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾದ ತಕ್ಷಣವೇ ಆರೋಗ್ಯ ಇಲಾಖೆ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ವಿಭಾಗದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡು ವರದಿ ಮಾಡಬೇಕೆಂದು ಸೂಚನೆ ನೀಡಿದರು.

ಗ್ರಾಮೀಣ ಕುಡಿಯುವ ನೀರಿನ ವಿಭಾಗದಿಂದ ಕೊರೆಯುವ ಕೊಳವೆಬಾವಿಗಳನ್ನು ಯಾವ ಯೋಜನೆಯಲ್ಲಿ ಕೊರೆಯಿಸಲಾಗಿದೆ. ವರ್ಷ, ಅಂದಾಜು ವೆಚ್ಚದ ವಿವರವನ್ನು ರೆಕಾರ್ಡ್ ಮಾಡಬೇಕು. ಬರಗಾಲ ಇರುವುದರಿಂದ
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ.25 ಲಕ್ಷಗಳನ್ನು ಕೊಳವೆಬಾವಿ ಆಳ ಹೆಚ್ಚಿಸಲು, ಪ್ಲೆಶಿಂಗ್, ಪೈಪ್‍ಲೈನ್ ಅಳವಡಿಕೆಗಾಗಿ ಮಂಜೂರು ಮಾಡಲಾಗಿದೆ. ಇದಲ್ಲದೇ ವಿಪತ್ತು ನಿರ್ವಹಣಾ ಘಟಕದಿಂದಲೂ ಕುಡಿಯುವ ನೀರಿನ ತುರ್ತು ಕಾಮಗಾರಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು ಅಧಿಕಾರಿಗಳು ಸಮಯೋಚಿತವಾಗಿ ಕೆಲಸ ಮಾಡಬೇಕೆಂದರು.

ಜಲಜೀವನ್ ಮಷಿನ್ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಮರು ಅವಧಿ ನಿಗದಿ ಮಾಡಿ ಅನುಮೋದನೆ ನೀಡಲಾಯಿತು. ಮಿಷನ್‍ನಿಂದ ದಾವಣಗೆರೆ ತಾ; ಕಾಟಿಹಳ್ಳಿ, ಅತ್ತಿಗೆರೆ, ಹರಿಹರ ತಾ; ಜಿಗಳಿ, ಚಿಕ್ಕಬಿದರಿ ಗ್ರಾಮಗಳಿಗೆ ಮತ್ತು ಚನ್ನಗಿರಿ ತಾ; ಮೇಲನಾಯಕನಕಟ್ಟೆ, ಅಸ್ತಾಪನಹಳ್ಳಿ ಗ್ರಾಮದಲ್ಲಿ ಜೆಜೆಎಂ ರಡಿ ಕಾಮಗಾರಿ ಕೈಗೊಳ್ಳಲು ಸಮಿತಿ ಅನುಮೋದನೆ ನೀಡಿತು. ಜಲಜೀವನ್ ಯೋಜನೆ ಮುಕ್ತಾಯವಾಗುತ್ತಿರುವುದರಿಂದ ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಂಡು ಜನರಿಗೆ ನೀರು ಒದಗಿಸಲು ಗ್ರಾಮೀಣ ನೀರು, ನೈರ್ಮಲ್ಯ ಇಲಾಖೆ ಇಂಜಿನಿಯರ್‍ಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸಮಿತಿ ಸದಸ್ಯರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ರವೀಂದ್ರನಾಯಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment