ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

BIG NEWS: ಚನ್ನಗಿರಿ ತುಮ್ಕೋಸ್ ಚುನಾವಣೆಯಲ್ಲಿ ಹೆಚ್. ಎಸ್. ಶಿವಕುಮಾರ್ ತಂಡಕ್ಕೆ ಭರ್ಜರಿ ಜಯ: 15 ಸ್ಥಾನಗಳಲ್ಲೂ ಜಯಭೇರಿ!

On: February 10, 2025 8:52 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:10-02-2025

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಅಡಿಕೆ ಬೆಳೆಗಾರರ ಸಂಘದ 15 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 15 ಸ್ಥಾನಗಳಲ್ಲಿಯೂ ಭರ್ಜರಿ ಜಯ ದಾಖಲಿಸಿರುವ ಬಿಜೆಪಿ ಮುಖಂಡ ಹಾಗೂ ಮಾಜಿ ತುಮ್ಕೋಸ್ ಅಧ್ಯಕ್ಷ ಹೆಚ್. ಎಸ್. ಶಿವಕುಮಾರ್ ತಂಡ ಆಡಳಿತದ ಚುಕ್ಕಾಣಿ ಹಿಡಿದಿದೆ. ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬೆಂಬಲಿತ 15 ಮಂದಿ ಹೀನಾಯ ಸೋಲು ಅನುಭವಿಸುವ ಮೂಲಕ ಮುಖಭಂಗಕ್ಕೆ ಒಳಗಾಗಿದೆ.

ತುಮ್ಕೋಸ್ ಚುನಾವಣೆಗೆ ಭಾನುವಾರ ಮತದಾನ ನಡೆಯಿತು. ಆರಂಭದಲ್ಲಿ ಸ್ವಲ್ಪ ಮಟ್ಟಿದೆ ಎರಡೂ ತಂಡಗಳ ನಡುವೆ ಹಣಾಹಣಿ ನಡೆಯಿತಾದರೂ ಮತ ಎಣಿಕೆ ಇನ್ನೂ ಬಾಕಿ ಇರುವಂತೆ ವಿರೂಪಾಕ್ಷಪ್ಪ ಬೆಂಬಲಿತ ಸದಸ್ಯರು ಒಬ್ಬೊಬ್ಬರೇ ಮನೆಯತ್ತ ಸಾಗಿದರು. ಕಳೆದ ಹಲವು ದಿನಗಳಿಂದ ಗ್ರಾಮ ಗ್ರಾಮಕ್ಕೆ ತೆರಳಿ ಮತಯಾಚನೆಯಲ್ಲಿ ತೊಡಗಿದ್ದ ಹೆಚ್. ಎಸ್. ಶಿವಕುಮಾರ್ ಬಣ ಭರ್ಜರಿ ಜಯ ಸಾಧಿಸಿ ಗೆಲುವಿನ ರಣಕೇಕೆ ಹಾಕಿದೆ.

ತುಮ್ಕೋಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನನಗೆ ಮತ್ತು ತಂಡದ ಎಲ್ಲಾ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಜಯಶೀಲರನ್ನಾಗಿ ಮಾಡಿದ ಸಹಕಾರ ಕ್ಷೇತ್ರದಲ್ಲಿನ ಹೆಚ್ಚಿನ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ ಮತದಾರರಿಗೆ ಹೃದಯಪೂರ್ವಕವಾಗಿ ಕೃತಜ್ಞತೆ ಹೇಳುವುದಾಗಿ ಹೆಚ್. ಎಸ್. ಶಿವಕುಮಾರ್ ತಿಳಿಸಿದ್ದಾರೆ.

ಒಬ್ಬ ರೈತನ ಮಗನಾದ ನನಗೆ ಸಹಕಾರ ಕ್ಷೇತ್ರದಲ್ಲಿ ಸೇವೆಯನ್ನು ಮಾಡಲು ಅವಕಾಶ ಕಲ್ಪಿಸಿದ ಎಲ್ಲರಿಗೂ ಋಣಿಯಾಗಿದ್ದೇವೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತೇವೆ. ಅಡಿಕೆ ಬೆಳೆಗಾರರ ಹಿತ ಕಾಪಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment