ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೋಳಿ ಶೀತ ಜ್ವರಕ್ಕೆ ಪಡಬೇಕಿಲ್ಲ ಆತಂಕ, ಯಾವೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು?

On: March 4, 2025 6:58 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:04-03-2025

ದಾವಣಗೆರೆ: ಕೋಳಿಶೀತ ಜ್ವರ(ಹಕ್ಕಿ ಜ್ವರ)ವು ಹೆಚ್5ಎನ್1 ವೈರಸ್ ನಿಂದ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಮಿಕವಾಗಿ ಹರಡುವುದಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಎಸ್‍ಓಪಿ ಅಳವಡಿಸಲು ಕ್ರಮವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋಳಿಶೀತ ಜ್ವರಕ್ಕೆ ಸಂಬಂಧಿಸಿದಂತೆ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಶೀಥಲ ಪ್ರದೇಶದ ವಲಸೆ ಹಕ್ಕಿಗಳು ವಂಶಾಭಿವೃದ್ಧಿಗಾಗಿ ಬಂದಾಗ ಹಿಕ್ಕೆ, ಪುಕ್ಕ ಹಾಗೂ ಬಾಯಿ ಮತ್ತು ಕಣ್ಣಿನಿಂದ ಹೊರ ಬರುವ ಸ್ರವಿಕೆಯಿಂದ ಕಾಯಿಲೆ ಹರಡು ಸಂಭವವಿದ್ದು, ಪಕ್ಷಿಗಳಿಗೆ ರೋಗವು ಹರಡುತ್ತದೆ ಎಂದು ತಿಳಿಸಿದರು.

ಇದು ಬಳ್ಳಾರಿ ಜಿಲ್ಲೆಯಯಲ್ಲಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಕುಕ್ಕುಟ ಸಂವರ್ಧನಾ ಕೇಂದ್ರದಲ್ಲಿ ಸಾಕಾಣಿಕೆ ಮಾಡಿದ ಅಸಿಲ್ ಮತ್ತು ಕಾವೇರಿ ತಳಿಯ ಕೋಳಿಗಳಿಗೆ ಫೆಬ್ರವರಿ 23 ರಂದು ಕೋಳಿ ಶೀತ ಜ್ವರ ರೋಗದ ಲಕ್ಷಣ ಕಂಡುಬಂದು ಕೆಲವು ಕೋಳಿಗಳು ಮರಣ ಹೊಂದಿದ್ದವು. ಪರೀಕ್ಷೆಗಾಗಿ ಭೋಪಾಲ್‍ನ ರಾಷ್ಟ್ರೀಯ ಹೈ ಸೆಕ್ಯುರಿಟಿ ಪ್ರಾಣಿ ರೋಗಗಳ ಪ್ರಯೋಗಾಲಯಕ್ಕೆ ಕಳುಹಿಸಿದ್ದು ಸಂಸ್ಥೆಯು ಕೋಳಿಶೀತ ಜ್ವರವೆಂದು ದೃಢೀಕರಿಸಿರುತ್ತದೆ. ಇದಕ್ಕಾಗಿ ಬಳ್ಳಾರಿಯಿಂದ ಹಾಗೂ ಚಿಕ್ಕಬಳ್ಳಾಪುರದಿಂದ ದಾವಣಗೆರೆಗೆ ಸಾಗಾಣಿಕೆಯಾಗುವ ಕೋಳಿಗಳನ್ನು ನಿರ್ಬಂಧಿಸಲು ಚೆಕ್ ಪೋಸ್ಟ್ ಗಳನ್ನು ಸ್ಥಾಪನೆ ಮಾಡಿ ಸಂಪೂರ್ಣ ನಿಗಾವಹಿಸಲು ಮತ್ತು ಎಲ್ಲಿಯಾದರೂ ಹಕ್ಕಿಗಳು ಮರಣ ಹೊಂದಿದಲ್ಲಿ, ತಕ್ಷಣ ಮಾಹಿತಿ ನೀಡಲು ಸಹಾಯವಾಣಿ ಸ್ಥಾಪಿಸಲಾಗುತ್ತಿದೆ ಎಂದರು.

ಬೇಯಿಸಿ ನಂತರ ಸೇವಿಸಿ:

ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು 70 ಡಿಗ್ರಿ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಬೇಯಿಸಿದಾಗ ವೈರಾಣು ನಾಶಗೊಳ್ಳುತ್ತದೆ. ಹಾಗಾಗಿ ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿದ ನಂತರ ಸೇವನೆ ಮಾಡಬೇಕು ಎಂದು ಹೇಳಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment