SUDDIKSHANA KANNADA NEWS/DAVANAGERE/DATE:12_11_2025
ದಾವಣಗೆರೆ: ತಾಲೂಕಿನ ರಾಮಗೊಂಡನಹಳ್ಳಿ ಗ್ರಾಮದಲ್ಲಿ ಅಪ್ರಾಪ್ತಳಿಗೆ ವಿವಾಹ ಮಾಡುತ್ತಿದ್ದಾರೆ ಎಂದು 112 ಹೊಯ್ಸಳಕ್ಕೆ ಕರೆ ಬಂದಿದ್ದು, ಕೂಡಲೇ ಘಟನಾ ಸ್ಥಳಕ್ಕೆ 112 ಕರ್ತವ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಬಾಲ್ಯ ವಿವಾಹ ನಿಲ್ಲಿಸಿದ ಘಟನೆ ನಡೆದಿದೆ.
ಈ ಸುದ್ದಿಯನ್ನೂ ಓದಿ: ಐಟಿ ಬಿಟಿ ಹಬ್ ಆಗಲಿದೆ ದಾವಣಗೆರೆ: 60 ದಿನಗಳಲ್ಲಿ10ಕ್ಕಿಂತ ಹೆಚ್ಚು ಐಟಿ ಕಂಪನಿಗಳ ಆಗಮನದ ನಿರೀಕ್ಷೆ!
ಅಪ್ರಾಪ್ತ ಸಂತ್ರಸ್ತೆಗೆ ವಿವಾಹ ಮಾಡಲು ಸಿದ್ದತೆ ನಡೆಸಿರುವುದು ಕಂಡುಬಂದಿದ್ದು, ಅಪ್ರಾಪ್ತ ಸಂತ್ರಸ್ತೆಯ ಪೋಷಕರಿಗೆ ಬಾಲ್ಯ ವಿವಾಹ ಮಾಡುವುದು ಕಾನೂನು ಬಾಹಿರ. ಅಪ್ರಾಪ್ತರಿಗೆ ವಿವಾಹ ಮಾಡಬಾರದೆಂದು ಸೂಕ್ತ ತಿಳುವಳಿಕೆ ನೀಡಿದ್ದು, ನಂತರ ದಾವಣಗೆರೆ ಜಿಲ್ಲೆಯ ಎಸಿಡಿಪಿಒ ಅಧಿಕಾರಿಗಳಿಗೆ ಮಾಹಿತಿ ನೀಡಿ ಘಟನಾ ಸ್ಥಳಕ್ಕೆ ಕರೆಸಿದ್ದಾರೆ.
ಮುಂದಿನ ಕ್ರಮಕ್ಕೆ ಅಪ್ರಾಪ್ತ ಸಂತ್ರಸ್ತೆಯನ್ನು ಅವರ ವಶಕ್ಕೆ ನೀಡಲಾಗಿದೆ. ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಾಲ್ಯ ವಿವಾಹವನ್ನು ತಡೆಗಟ್ಟುವಲ್ಲಿ \ಯಶಸ್ವಿಯಾದ 112 ಕರ್ತವ್ಯದಲ್ಲಿದ್ದ ಮಹಿಳಾ ಹೆಡ್ ಕಾನ್ ಸ್ಟೇಬಲ್ ಸವಿತಾ ಹಾಗೂ ಚಾಲಕ ಸಿದ್ದೇಶ್ ಪುಟಗನಾಳ್ ಅವರನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರು ಪ್ರಶಂಸಿಸಿದ್ದಾರೆ.


