SUDDIKSHANA KANNADA NEWS/ DAVANAGERE/ DATE:25-12-2024
ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರಕರಣ ಸಂಬಂಧ ಒಬ್ಬ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿರುವುದನ್ನು ಸಿಎಂ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಅಧಿಕಾರಿಯನ್ನು ಅಮಾನತ್ತುಗೊಳಿಸಲಾಗಿದೆ. ಪೊಲೀಸ್ ಠಾಣೆಯೊಂದರಲ್ಲಿ ರಾಜಕೀಯ
ಪಕ್ಷದ ಸಭೆ ನಡೆಸಲು ಅವಕಾಶ ನೀಡಿದ್ದು ತಪ್ಪು ಎಂದು ಹೇಳಿದರು.
ಸಿ.ಟಿ.ರವಿಯವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಅವರನ್ನು ಬೇರೆಡೆಗಳಿಗೆ ಕರೊದೊಯ್ಯಲಾಗಿತ್ತು ಎಂದು ಬೆಳಗಾವಿಯ ಪೊಲೀಸ್ ಕಮೀಷನರ್ ರವರು ಸಹ ಸ್ಪಷ್ಟಪಡಿಸಿರುವುದಾಗಿ ತಿಳಿಸಿದರು.
ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಗೆ ದೂರು:
ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಶಾಸಕ ಸಿ.ಟಿ.ರವಿಯವರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿ. ಟಿ. ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.