Home ದಾವಣಗೆರೆ ಭೂ ಪರಿವರ್ತನೆಗಳಿಗೆ ಸಂಬಂಧಿಸಿದಂತೆ ತಿದ್ದುಪಡಿ ಮೂಲಕ ಯಾವೆಲ್ಲಾ ವಿಚಾರಗಳನ್ನು ಸರಳೀಕರಣ ಮಾಡಲಾಗಿದೆ..?
ದಾವಣಗೆರೆನವದೆಹಲಿಬೆಂಗಳೂರು

ಭೂ ಪರಿವರ್ತನೆಗಳಿಗೆ ಸಂಬಂಧಿಸಿದಂತೆ ತಿದ್ದುಪಡಿ ಮೂಲಕ ಯಾವೆಲ್ಲಾ ವಿಚಾರಗಳನ್ನು ಸರಳೀಕರಣ ಮಾಡಲಾಗಿದೆ..?

Share
Share

ಭೂ ಪರಿವರ್ತನೆಗಳಿಗೆ ಸಂಬಂಧಿಸಿದಂತೆ ತಿದ್ದುಪಡಿ ಮೂಲಕ ಯಾವೆಲ್ಲಾ ವಿಚಾರಗಳನ್ನು ಸರಳೀಕರಣ ಮಾಡಲಾಗಿದೆ..?

* ಮಾಸ್ಟರ್ ಪ್ಲಾನ್ ಪ್ರಕಾರ ಭೂ ಬಳಕೆಗೆ ಪರಿವರ್ತನೆ ಅವಶ್ಯಕತೆ ತೆಗೆದುಹಾಕಲಾಗಿದೆ. ಇಂತಹ ಪ್ರಕರಣಗಳಲ್ಲಿ ನೇರವಾಗಿ Plan approval ಗೆ ಹೋಗಬಹುದು.

* ⁠ಮಾಸ್ಟರ್ ಪ್ಲಾನ್ ಹೊರಗಿನ ಹಾಗೂ ಪರಿಭಾವಿತ ಭೂ ಪರಿವರ್ತನೆ (ಡೀಮ್ಡ್ ಕನ್ವರ್ಷನ್) ಸಹ ಈ ಹಿಂದೆ ಮೂರು ನಾಲ್ಕು ತಿಂಗಳುಸಮಯ ಆಗುತ್ತಿತ್ತು. ಆದರೆ, ಪ್ರಸ್ತುತ 30 ದಿನಗಳಲ್ಲಿ ಭೂಪರಿವರ್ತನೆ ಕಡ್ಡಾಯಗೊಳಿಸಲಾಗಿದೆ.

* ⁠ಭೂ ಪರಿವರ್ತನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ  ನೀಡಲಾಗಿದೆ.

* ⁠ಜಿಲ್ಲಾಧಿಕಾರಿಗಳು 30ದಿನಗಳ ಒಳಗಾಗಿ ಸಂಬಂಧಿತಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಪರಿವರ್ತನೆಗೆಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು.

* ⁠30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆಗೆ ಅವಕಾಶ ಲಭ್ಯವಾಗುತ್ತದೆ.

* ⁠ಸಣ್ಣ ಕೈಗಾರಿಕೆಗಳು ಎರಡು ಎಕರೆ ವರೆಗೆ ಕೈಗಾರಿಕಾಉದ್ದೇಶಕ್ಕಾಗಿ ಭೂ ಪರಿವರ್ತನೆ ಅಗತ್ಯ ಇಲ್ಲ.
* ⁠ಭಾರತ ದೇಶದಲ್ಲಿ ಪ್ರಸ್ತುತ ನವೀಕರಿಸಬಹುದಾದಇಂಧನದ ಕಡೆ ಹೆಜ್ಜೆ ಇಡುತ್ತಿದೆ. ಹೀಗಾಗಿ ಇದಕ್ಕೂ ಭೂಪರಿವರ್ತನೆಯಿಂದ ವಿನಾಯಿತಿ ನೀಡಲಾಗಿದೆ.

* ⁠ಇಂಧನ ಇಲಾಖೆಯ ಅನುಮತಿ ಪಡೆದಿದ್ದರೆ, ನವೀಕರಿಸಬಹುದಾದ ಇಂಧನದ ಯೋಜನಾ ಘಟಕವನ್ನು ನಿರ್ಮಿಸಲುಭೂ ಪರಿವರ್ತನೆ ಅಗತ್ಯ ಇಲ್ಲ.

* ⁠ಭೂ ಪರಿವರ್ತನೆಗೆ ಸಂಬಂಧಿಸಿದ ವಿಚಾರಗಳನ್ನು ಸರಳೀಕರಣಗೊಳಿಸಲಾಗಿದೆ.

* ⁠ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಕಂದಾಯನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈಹಿಂದೆ ಯಾವುದೇ ಸ್ಪಷ್ಟ ನಿಯಮ ಇರಲಿಲ್ಲ. ಪರಿಣಾಮ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅನೇಕ ಆದೇಶಗಳನ್ನುಹೊರಡಿಸಿರುವ ಉದಾಹರಣೆಗಳು ಸಾಕಷ್ಟಿವೆ.

* ⁠RCCMS ಸೇರಿದಂತೆ ಡಿಜಿಟೈಶೇಷನ್‌ ಮುಖಾಂತರ ಆದೇಶಗಳನ್ನು ನೀಡಲಾಗುವುದು. ಇವು ಸುಧಾರಣಾ ಕಾನೂನುಗಳಿಗೆ ನ್ಯಾಯಿಕ ಬಲವನ್ನು ಒದಗಿಸಲಾಗಿದೆ.

* ⁠ಹೀಗಾಗಿ ಅದಕ್ಕೂ ನಿಯಮಗಳನ್ನು ರೂಪಿಸಿ ಸರಿಪಡಿಸಲಾಗಿದೆ. ಕಾನೂನು ಮೀರಿ ಯಾರೂ ನ್ಯಾಯಧಾನ ನೀಡಲು ಸಾಧ್ಯವಿಲ್ಲ. ಹೀಗೆ ವಿವಿಧ ಕಲಂಗಳು ಹಾಗೂ ನಿಯಮಗಳಿಗೆ ತಿದ್ದುಪಡಿ ಮೂಲಕಜಾರಿಗೊಳಿಸಲಾಗಿದೆ.

* ⁠ಕಂದಾಯ ನ್ಯಾಯಾಲಯಗಳನ್ನು online ಮುಖಾಂತರ ನಡೆಸಲು ಕಾನೂನು ತರಲಾಗಿದೆ. ವಾದಿ ಹಾಗೂ ಪ್ರತಿವಾದಿಗಳು ಕಚೇರಿಗಳಿಗೆ ಸುತ್ತುವುದರ ಬದಲಿಗೆ ಅವರು online ಮುಖಾಂತರವೇ ನ್ಯಾಯಾಲಯ ಕಲಾಪಗಳಿಗೆ ಭಾಗವಹಿಸುವ ಸುಲಭ ಮಾರ್ಗ ನೀಡಲಾಗಿದೆ.

* ⁠ಅದೇ ರೀತಿ ಭೂ ಸುರಕ್ಷಾ ಮೋಜನಿಗೆ ಈಗ ಕಾನೂನಿನ ಬಲ ಒದಗಿಸಲಾಗಿದ್ದು, ನಿಯಮಗಳಲ್ಲಿ ಅವಕಾಶ ನೀಡಲಾಗಿದೆ.

ಒಟ್ಟಾರೆ ಉದ್ದೇಶ: ಆಡಳಿತದಲ್ಲಿ ಸರಳೀಕರಣ ಪಾರದರ್ಶಕತೆ ಜಾರಿಗೊಳಿಸುವ ಮುಖಾಂತರ ಆಡಳಿತದಲ್ಲಿ ಗಣನೀಯ ಸುಧಾರಣೆ ತರುವುದು ನಮ್ಮ ಮೂಲ ಉದ್ದೇಶವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *