ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಲೈಂಗಿಕ ದೌರ್ಜನ್ಯ ಆರೋಪಿ ಅಮ್ಜದ್ ವಿರುದ್ದ ಮೊದಲ ಪತ್ನಿಯ ಪುತ್ರನೇ ದೂರು ಕೊಡಲು ಪೊಲೀಸ್ ಠಾಣೆಗೆ ಹೋಗಿದ್ದ!

On: February 3, 2025 9:11 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:03-02-2025

ದಾವಣಗೆರೆ: ಹಲವು ಮಹಿಳೆಯರು, ಯುವತಿಯರು ಹಾಗೂ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಂಧನಕ್ಕೊಳಗಾಗಿರುವ ಚನ್ನಗಿರಿ ಮೆಡಿಕಲ್ ಶಾಪ್ ಮಾಲೀಕ ಅಮ್ಜದ್ ನ ಕೃತ್ಯಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ.

ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಹರಿಬಿಟ್ಟ ಆರೋಪಿ ಅಮ್ಜದ್ ವಿರುದ್ಧವೇ ಆತನ ಪುತ್ರನು ಬಸವನಗರ ಪೊಲೀಸ್ ಠಾಣೆಗೆ ತೆರಳಿದ್ದ ಎಂದು ತಿಳಿದು ಬಂದಿದೆ.

ಎರಡು ಮದುವೆಯಾಗಿದ್ದ ಅಮ್ಜದ್ ಮೊದಲ ಪತ್ನಿಯ ಪುತ್ರನು ಸ್ಫೋಟಕ ಆರೋಪ ಮಾಡಿದ್ದಾನೆ. ಮನೆಯಲ್ಲಿ ಇರಲು ಬಿಡುತ್ತಿಲ್ಲ. ಸುಖಾಸುಮ್ಮನೆ ಬೈಯ್ಯುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಸಾಮಾನ್ಯ ಆಗಿತ್ತು. ಪದೇ ಪದೇ ಮನೆಯಿಂದ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾನೆ ಎಂದು ಅಮ್ಜದ್ ಪುತ್ರ ಬಸವನಗರ ಪೊಲೀಸ್ ಠಾಣೆಗೆ ತೆರಳಿದ್ದ ಎಂದು ತಿಳಿದು ಬಂದಿದೆ.

ಅಮ್ಜದ್ ಗೆ ಕರೆ ಮಾಡಿದ ಬಸವನಗರ ಪೊಲೀಸ್ ಠಾಣೆಗೆ ಬರುವಂತೆ ಸೂಚಿಸಿದ್ದಾರೆ. ಆದ್ರೆ, ಅಮ್ಜದ್ ನಾಟಕವಾಡಿದ್ದ. ನಾನು ಬೇರೆ ಕಡೆ ಇದ್ದೇನೆ, ಬೆಳಿಗ್ಗೆ ಠಾಣೆಗೆ ಹಾಜರಾಗುವುದಾಗಿ ಹೇಳಿದ್ದ. ಆದ್ರೆ, ಅಷ್ಟರೊಳಗೆ ಅಮ್ಜದ್ ನ ರಾಸಲೀಲೆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸುಮಟೋ ಕೇಸ್ ದಾಖಲಿಸಿ ಕಾಮುಕನನ್ನು ಬಂಧಿಸಿದ್ದಾರೆ.

ಆರೋಪಿ ಬಂಧನ ಆಗುವವರೆಗೆ ಬಸವನಗರ ಪೊಲೀಸರಿಗೆ ಅಮ್ಜದ್ ಕಾಮುಕತನ ಗೊತ್ತಾಗಿರಲಿಲ್ಲ. ಸದ್ಯ ಆರೋಪಿ ನ್ಯಾಯಾಂಗ ಬಂಧನಲ್ಲಿದ್ದು, ತನಿಖೆ ಮುಂದುವರಿದಿದೆ. ಮೊದಲ ಪತ್ನಿಯ ಪುತ್ರನೇ ತಂದೆ ವಿರುದ್ಧ ಪೊಲೀಸರಿಗೆ ದೂರು ನೀಡಲು ತೆರಳಿದ್ದು ಈಗ ಬೆಳಕಿಗೆ ಬಂದಿದೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment