ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೈ ಶಾಸಕರು ಸಚಿವರ ನಡುವಿನ ಸಂಘರ್ಷ: ಬಿಜೆಪಿಗೆ ಬ್ರಹ್ಮಾಸ್ತ್ರ…!

On: January 15, 2025 9:33 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:15-01-2025

ದಾವಣಗೆರೆ: ಸಚಿವರು ಹಾಗೂ ಕಾಂಗ್ರೆಸ್ ನಡುವಿನ ಜಗಳ ತಾರಕಕ್ಕೇರಿದೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಬದಲಾವಣೆ ಆಗಬೇಕು ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಬಹಿರಂಗವಾಗಿಯೇ ಆಗ್ರಹಿಸಿದ್ದರು. ಇದಕ್ಕೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಸಚಿವ ಮಲ್ಲಿಕಾರ್ಜುನ್ ರೋಷಾಗ್ನಿ ಹೊರ ಹಾಕಿದ್ದರು. ಇದು ಬುಸುಗುಡುತ್ತಿದ್ದಂತೆ ಬೇರೆ ಜಿಲ್ಲೆಗಳಲ್ಲಿಯೂ ಇದೇ ಸ್ಥಿತಿ ಇದೆ.

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡುವಿನ ಸಂಘರ್ಷವೂ ಜೋರಾಗಿದೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಇದು ಭುಗಿಲೆದ್ದಿದೆ. ಮಾತ್ರವಲ್ಲ, ಡಿಸಿಎಂ ಡಿ. ಕೆ. ಶಿವಕುಮಾರ್ ನಡುವಿನ ಜಗಳವೂ ತಾರಕಕ್ಕೇರಿದೆ. ಇದು ಬಿಜೆಪಿಗೆ ಬ್ರಹ್ಮಾಸ್ತ್ರವಾಗಿದೆ.

ಇನ್ನು ಸಚಿವ ಸುಧಾಕರ್ ಹಾಗೂ ಗೋವಿಂದಪ್ಪ ನಡುವಿನ ಜಗಳವೂ ಬಹಿರಂಗವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನಡೆಗಳು ಶಾಸಕರಿಗೆ ಇಷ್ಟವಾಗುತ್ತಿಲ್ಲ. ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯ ಘಟಕವು ಸೋಷಿಯಲ್ ಮೀಡಿಯಾದಲ್ಲಿ ಸಖತ್ತಾಗಿಯೇ ಬಳಸಿಕೊಂಡಿದೆ.

ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಂತರಿಕ ಕಲಹ ಈಗ ಜಿಲ್ಲಾ ಮಟ್ಟಕ್ಕೂ ವ್ಯಾಪಿಸಿದೆ!! ಜಿಲ್ಲಾ ಉಸ್ತುವಾರಿ ಸಚಿವರಿಗೂ ಹಾಗೂ ಕೈ ಶಾಸಕರ ಮಧ್ಯದ ಜಗಳ ಈಗ ಹಾದಿ-ಬೀದಿಯಲ್ಲಿ ನಡೆಯುತ್ತಿದೆ!! ದಾವಣಗೆರೆ,ಚಿತ್ರದುರ್ಗ, ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕಾಂಗ್ರೆಸ್‌ ಒಡೆದ ಮನೆಯಾಗಿರುವುದು ಖಚಿತ-ನಿಶ್ಚಿತ-ಖಂಡಿತ! ಎಂದು ವ್ಯಂಗ್ಯವಾಡಿದೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment