SUDDIKSHANA KANNADA NEWS/ DAVANAGERE/ DATE:13-01-2025
ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರ ಮೂಲದ ಶೇಖ್ ನಸ್ರುನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಕುಡಿದ ನಶೆಯಲ್ಲಿ ಆರೋಪಿ ಕೃತ್ಯ ಎಸಗಿದ್ದ ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗೆ ಜ.24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಮತಾಂಧರ ವಿಕೃತಿ ಹೆಚ್ಚಾಗುತ್ತಲೇ ಇದೆ. ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಎತ್ತಂಗಡಿ ಮಾಡುವ ಸಂಚು ಸರ್ಕಾರ ಬಂದಾಗಿನಿಂದಲೂ ನಡೆಯುತ್ತಿದೆ. ಹೀಗಾಗಿಯೇ ಚಾಮರಾಜಪೇಟೆಯಲ್ಲಿ ಹಸುಗಳೇ ಇಲ್ಲದಂತೆ ಮಾಡಲು ಮತಾಂಧರಿಗೆ ಸುಪಾರಿ ಕೊಟ್ಟವರು ಯಾರು? ಈ ಕುರಿತು ಪೊಲೀಸರು ಸಮಗ್ರವಾಗಿ ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮತೆಗೆದುಕೊಳ್ಳಬೇಕಿದೆ ಎಂದು ಬಿಜೆಪಿ ಆಗ್ರಹಿಸಿತ್ತು.
ಜಿಹಾದಿ ಮನಸ್ಥಿತಿಯ ದುರುಳರು ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ, ನಾವೆಂದೂ ಕಂಡು ಕೇಳರಿಯದ ಘಟನೆ ಇದಾಗಿದೆ. ಮಚ್ಚುಗಳನ್ನು ಉಪಯೋಗಿಸಿ ಹಸುಗಳ ಕೆಚ್ಚಲು ಕತ್ತರಿಸಿದ್ದಾರೆ. ಈ ಮೂಲಕ ಸಂಕ್ರಾಂತಿ ಹಬ್ಬದ ವೇಳೆ ಕಾಂಗ್ರೆಸ್ ಸರ್ಕಾರ ಹಿಂದೂಗಳಿಗೆ ಯಾವ ಸಂದೇಶ ರವಾನಿಸುತ್ತಿದೆ? ಹಿಂದುಗಳನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನೋಡಲಾಗುತ್ತಿದೆ ಎಂದು ಕಿಡಿಕಾರಿತ್ತು.
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಮೇಲೆ ನಡೆದ ವಿಕೃತ ಕೃತ್ಯವನ್ನು ಖಂಡಿಸಿ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್ ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಮತಾಂಧರ ವಿಕೃತಿ ಹೆಚ್ಚಾಗುತ್ತಲೇ ಇದೆ. ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಎತ್ತಂಗಡಿ ಮಾಡುವ ಸಂಚು ಸರ್ಕಾರ ಬಂದಾಗಿನಿಂದಲೂ ನಡೆಯುತ್ತಿದೆ. ಹೀಗಾಗಿಯೇ ಚಾಮರಾಜಪೇಟೆಯಲ್ಲಿ ಹಸುಗಳೇ ಇಲ್ಲದಂತೆ ಮಾಡಲು ಮತಾಂಧರಿಗೆ ಸುಪಾರಿ ಕೊಟ್ಟವರು ಯಾರು? ಈ ಕುರಿತು ಪೊಲೀಸರು ಸಮಗ್ರವಾಗಿ ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮತೆಗೆದುಕೊಳ್ಳಬೇಕಿದೆ ಎಂದು ಒತ್ತಾಯಿಸಿತ್ತು.