ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Cricket World Cup: ಇಂಗ್ಲೆಂಡ್ ವಿರುದ್ಧದ ಫಲಿತಾಂಶ ಮರುಕಳಿಸಲಿಲ್ಲ: ಅಪ್ಘಾನಿಸ್ತಾನಕ್ಕೆ ಹೀನಾಯ ಸೋಲುಣಿಸಿದ ಕಿವೀಸ್ ಪಡೆ….!

On: October 18, 2023 5:33 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-10-2023

ಚಿದಂಬರಂ ಸ್ಟೇಡಿಯಂ: ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ವಿಶ್ವಕಪ್‌ ಕ್ರಿಕೆಟ್ (Cricket World Cup)ನ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ 149 ರನ್‌ಗಳ ಅಂತರದಿಂದ ನ್ಯೂಜಿಲ್ಯಾಂಡ್ ತಂಡವು ಭರ್ಜರಿ ಜಯ ದಾಖಲಿಸಿದೆ.

READ ALSO THIS STORY:

ಗೋಧಿ (Wheat) ಬೆಳೆಗಾರರಿಗೆ ಬಂಪರ್ ಸುದ್ದಿ, ಪ್ರತಿ ಕ್ವಿಂಟಾಲ್ ಗೆ 150 ರೂ. ಹೆಚ್ಚಳ, ರೈತರಿಗೆ ಸಿಗಲಿದೆ 2275 ರೂ. ಬೆಂಬಲ ಬೆಲೆ: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ಈ ಮೂಲಕ ನ್ಯೂಜಿಲೆಂಡ್ ಸತತ ನಾಲ್ಕನೇ ಗೆಲುವು ದಾಖಲಿಸಿದೆ. ವಿಲ್ ಯಂಗ್ (54), ಟಾಮ್ ಲಾಥಮ್ (68) ಮತ್ತು ಗ್ಲೆನ್ ಫಿಲಿಪ್ಸ್ (71) ಅವರ ಅರ್ಧಶತಕಗಳ ನೆರವಿನಿಂದ ಕಿವೀಸ್ 6 ವಿಕೆಟ್‌ಗೆ 288 ರನ್ ಗಳ ಬೃಹತ್
ಮೊತ್ತ ಪೇರಿಸಿತು.

ಆದ್ರೆ, ಈ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ ಕೇವಲ 34.4 ಓವರ್‌ಗಳಲ್ಲಿ 139 ರನ್‌ಗಳಿಗೆ ಸರ್ವಪತನ ಕಂಡಿತು. ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸಿದ್ದ ಅಫ್ಘಾನಿಸ್ತಾನ ತಂಡವು ಅದೇ ವಿಶ್ವಾಸದಲ್ಲಿ ಕಣಕ್ಕಿಳಿದಿತ್ತು. ಸಂಘಟಿತ ಪ್ರಯತ್ನ ಮಾಡುತ್ತೆ, ಹೋರಾಟ ರೋಚಕವಾಗಿರುತ್ತದೆ ಎಂದು ಭಾವಿಸಲಾಗಿತ್ತು. ಆದ್ರೆ, ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೋಲು ಕಂಡಿದೆ.

ವೀರೋಚಿತ ಗೆಲುವು ಪುನರಾವರ್ತಿಸಲು ಅಫ್ಘಾನಿಸ್ತಾನಕ್ಕೆ ಸಾಧ್ಯವಾಗಲಿಲ್ಲ. ರಹಮತ್ ಶಾ (36) ಮಾತ್ರ ಹೋರಾಟದ ಪ್ರದರ್ಶನ ತೋರಿದರೂ ತಂಡದ ಮೊತ್ತ ನೂರು ದಾಟುವಲ್ಲಿ ನೆರವಾದರು. ನ್ಯೂಜಿಲ್ಯಾಂಡ್ ಪರ ಲಾಕಿ ಫರ್ಗುಸನ್ 3, ಮಿಚೆಲ್ ಸಾಂಟನರ್ 3 ಹಾಗೂ ಟ್ರೆಂಟ್ ಬೌಲ್ಟ್ 2 ವಿಕೆಟ್ ಪಡೆದರು. ಮ್ಯಾಟ್ ಹೆನ್ರಿ ಹಾಗೂ ರಚಿನ್ ರವೀಂದ್ರ ತಲಾ ಒಂದು ವಿಕೆಟ್ ಪಡೆದರು.

ಅಫ್ಘಾನಿಸ್ತಾನ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡರೂ ಕಿವೀಸ್ ಬ್ಯಾಟ್ಸಮನ್ ಗಳ ಅಬ್ಬರದಿಂದ ಬೃಹತ್ ಮೊತ್ತ ಪೇರಿಸಿತು. ಇಂಗ್ಲೆಂಡ್ ತಂಡವನ್ನು ಮಣಿಸಿ ಅಚ್ಚರಿ ಫಲಿತಾಂಶ ಕೊಟ್ಟಿದ್ದ ಅಫ್ಘಾನಿಸ್ತಾನ ತಂಡವು ನ್ಯೂಜಿಲ್ಯಾಂಡ್
ತಂಡದ ವಿರುದ್ಧ ಹೀನಾಯ ಸೋಲು ಕಂಡಿತು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment