ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಷ್ಟಪಟ್ಟಿರುವ ಡಿ. ಕೆ. ಶಿವಕುಮಾರ್ ಸಿಎಂ ಆಗಿಯೇ ಆಗ್ತಾರೆ, ನಮಗೆ ಆರ್ಡರ್ ಮಾಡಬೇಕು: ಶಿವಗಂಗಾ ಬಸವರಾಜ್

On: January 13, 2025 9:08 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:13-01-2025

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಕಷ್ಟಪಟ್ಟು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತಂದಿದ್ದಾರೆ. ಅವರೇ ಮುಖ್ಯಮಂತ್ರಿಯಾಗಬೇಕಿತ್ತು. ಬದಲಾದ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರು. ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ. ಖಾಲಿಯಾದ ಬಳಿಕ ಡಿ. ಕೆ. ಶಿವಕುಮಾರ್ ಅವರು ಹಕ್ಕು ಮಂಡನೆ ಮಾಡುತ್ತಾರೆ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ವಿ. ಬಸವರಾಜ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು ಬಹುಮತ ಬಂದಾಗ ಸಿಎಂ ಆಗುವುದು ಕಾಂಗ್ರೆಸ್ ಸಂಪ್ರದಾಯ. ಕಷ್ಟಪಟ್ಟಿದ್ದು, ಮುಂದಿನ ದಿನಗಳಲ್ಲಿ ಒಳ್ಳೆಯ ದಿನಗಳು ಡಿ. ಕೆ. ಶಿವಕುಮಾರ್ ಅವರಿಗೆ ಬರುತ್ತದೆ.
ಇದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು.

ನನ್ನ ಕ್ಷೇತ್ರದಲ್ಲಿನ ಜನರು ನನ್ನನ್ನು ಭೇಟಿಗೆ ಬಂದಾಗ ಕೆಲಸ ಮಾಡಿಕೊಡಿ ಎಂದು ಕೈ ಮುಗಿಯುತ್ತಾರೆ, ಕಾಲಿಗೆ ಬೀಳಲು ಬರುತ್ತಾರೆ. ಅವರಿಗೆ ನಾನು ಹೇಳುತ್ತೇನೆ, ನೀವು ಆರ್ಡರ್ ಮಾಡಬೇಕೆಂದು. ಯಾಕೆಂದರೆ ಜನರು ಗೆಲ್ಲಿಸಿದ್ದಾರೆ. ಅದೇ
ರೀತಿಯಲ್ಲಿ ಶಾಸಕರನ್ನು ಗೆಲ್ಲಿಸಿರುವ ಡಿ. ಕೆ. ಶಿವಕುಮಾರ್ ಅವರು ನಮಗೆ ಆರ್ಡರ್ ಮಾಡಬೇಕು. 130 ಶಾಸಕರು ಕಾಂಗ್ರೆಸ್ ಪಕ್ಷದ ಸರ್ಕಾರದ ಪರವಾಗಿಯೇ ಇದ್ದೇವೆ ಎಂದು ತಿಳಿಸಿದರು.

ಸಿಎಂ ಸ್ಥಾನದ ಬಗ್ಗೆ ಸಚಿವರು ಹಾಗೂ ಶಾಸಕರು ನನ್ನ ಪರವಾಗಿ ಬ್ಯಾಟ್ ಬೀಸುವುದು ಬೇಡ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಡಿ. ಕೆ. ಶಿವಕುಮಾರ್ ಅವರು ಒಳ್ಳೆಯ ಅರ್ಥದಲ್ಲಿ ಹೇಳಿದ್ದಾರೆ. ತಪ್ಪಾಗಿ ಕೆಟ್ಟಾದಾಗಿ ನೋಡಿದರೆ
ತಪ್ಪಾಗಿ ಕೆಟ್ಟದಾಗಿ ಕಾಣುತ್ತದೆ. ಒಳ್ಳೆ ರೀತಿಯಲ್ಲಿ ನೋಡಿದರೆ ಒಳ್ಳೆಯದಾಗಿ ಕಾಣುತ್ತದೆ. ಯಾಕೆಂದರೆ ಕಷ್ಟಪಟ್ಟು  ಶಾಸಕರನ್ನು ಗೆಲ್ಲಿಸಿದ್ದಾರೆ, ಶಾಸಕರಿಗೋಸ್ಕರ ದುಡಿದಿದ್ದಾರೆ. ಹಾಗಾಗಿ ಅವರು ಸಿಎಂ ಆಗಿಯೇ ಆಗುತ್ತಾರೆ ಎಂಬ ಹೇಳಿಕೆಯಲ್ಲಿ ಬದಲಾವಣೆ ಇಲ್ಲ ಎಂದು ತಿಳಿಸಿದರು.

ಡಿ. ಕೆ. ಶಿವಕುಮಾರ್ ಅವರ ಪರವಾಗಿ ಕಾಂಗ್ರೆಸ್ ಶಾಸಕರ ಬೆಂಬಲ ಇದೆ. ಹೈಕಮಾಂಡ್ ನಿರ್ಧಾರವೇ ಅಂತಿಮ. ಹೈಕಮಾಂಡ್ ತೀರ್ಮಾನ ಪ್ರಶ್ನಿಸಲು ನಾವು ಆಗದು. ಸಿಎಂ ಸ್ಥಾನ ನೀಡುವುದು ಹೈಕಮಾಂಡ್. ನಾನು ಹಾಗೂ ಮತ್ತೊಬ್ಬ ಸಚಿವರು ಹಾಗೂ ಶಾಸಕರಲ್ಲ. ಸಚಿವ ಕೆ. ಎನ್. ರಾಜಣ್ಣ ಹೇಳಿದಂತೆ ಡಿ. ಕೆ. ಶಿವಕುಮಾರ್ ಅವರು ಐದು ವರ್ಷ ಮುಖ್ಯಮಂತ್ರಿಯಾಗಬೇಕು. ಎರಡೂವರೆ ವರ್ಷವಲ್ಲ. ಆದ್ರೆ, ಬದಲಾದ ರಾಜಕೀಯದಲ್ಲಿ ಹೈಕಮಾಂಡ್ ಒಪ್ಪಿದರೆ ಡಿ. ಕೆ. ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಅಂತರಾಷ್ಟ್ರ

ನ. 26ರಿಂದ ಐದು ದಿನಗಳ ಶಾಮನೂರು ಡೈಮಂಡ್, ಶಿವಗಂಗಾ ಕಪ್ 2025: ಅಂತರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜನೆ

ಅಪಘಾತದಲ್ಲಿ ಮೃತಪಟ್ಟ ಶಿಕ್ಷಕನ ಕುಟುಂಬಕ್ಕೆ ಸಿಕ್ತು 1 ಕೋಟಿ ಪರಿಹಾರ! ಸಿಕ್ಕಿದ್ದು ಹೇಗೆ ಗೊತ್ತಾ?

ಭದ್ರತೆ

ಭದ್ರತೆ ಸವಾಲು ನಿಭಾಯಿಸದ, ದೇಶದ ಭದ್ರತಾ ವ್ಯವಸ್ಥೆ ವೈಫಲ್ಯ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಲಿ: ಬಿ. ಕೆ. ಹರಿಪ್ರಸಾದ್ ಆಗ್ರಹ

ಧರ್ಮೇಂದ್ರ

ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಾ ಚೇತರಿಕೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಹೇಮಾ ಮಾಲಿನಿ, ಇಶಾ ಡಿಯೋಲ್ ಕೆಂಡಾಮಂಡಲ!

ಪ್ರಭಾ ಮಲ್ಲಿಕಾರ್ಜುನ್

ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಹೆಚ್ಚಿನ ಸಂಶೋಧನೆಗೆ ಅನುದಾನ ಕೊಡುವಂತೆ ಕೇಂದ್ರ ಕೃಷಿ ಸಚಿವರಿಗೆ ಮನವಿ: ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ

ಕೆಂಪು ಕೋಟೆ ಪ್ರಬಲ ಸ್ಫೋಟ ಹಿನ್ನೆಲೆ: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಕಟ್ಟೆಚ್ಚರ?

Leave a Comment