Home ದಾವಣಗೆರೆ ಕಾನೂನು ಪದವೀಧರರಿಗೆ ಸಿಹಿಸುದ್ದಿ: ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯಿಂದ ಪ್ರೋತ್ಸಾಹಧನ ಯೋಜನೆ
ದಾವಣಗೆರೆಬೆಂಗಳೂರುವಾಣಿಜ್ಯ

ಕಾನೂನು ಪದವೀಧರರಿಗೆ ಸಿಹಿಸುದ್ದಿ: ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯಿಂದ ಪ್ರೋತ್ಸಾಹಧನ ಯೋಜನೆ

Share
ಪ್ರೋತ್ಸಾಹಧನ
Share

ದಾವಣಗೆರೆ: ಹಿಂದುಳಿದ ವರ್ಗಗಳ ಇಲಾಖೆಯಿಂದ ವಕೀಲರ ವೃತ್ತಿ ಕೈಗೊಳ್ಳುವ ಅರ್ಹ ಕಾನೂನು ಪದವೀಧರ ಅಭ್ಯರ್ಥಿಗಳಿಗೆ ಪ್ರಸಕ್ತ ಸಾಲಿನ ಪ್ರೋತ್ಸಾಹಧನ ಕಾರ್ಯಕ್ರಮದಡಿ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಫೀಸ್‌ನಿಂದ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 5 ರೊಳಗಾಗಿ ಸಲ್ಲಿಸಬೇಕಾಗಿದೆ.

ಅರ್ಜಿ ಪಡೆಯುವ ಹಾಗೂ ಸಲ್ಲಿಸುವ ವಿಳಾಸ:

ಕೊಠಡಿ ಸಂಖ್ಯೆ 46, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು ರಸ್ತೆ, ದಾವಣಗೆರೆ.

Share

Leave a comment

Leave a Reply

Your email address will not be published. Required fields are marked *

Related Articles