Home ದಾವಣಗೆರೆ ದಾವಣಗೆರೆ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ: ಮುಸ್ಲಿಂ ನಾಯಕರ ವಿರುದ್ಧದ ಶಿಸ್ತುಕ್ರಮಕ್ಕೆ ‘ದೈತ್ಯ’ರ ವಿನಾಯಿತಿಯೇಕೆ?
ದಾವಣಗೆರೆಬೆಂಗಳೂರು

ದಾವಣಗೆರೆ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ: ಮುಸ್ಲಿಂ ನಾಯಕರ ವಿರುದ್ಧದ ಶಿಸ್ತುಕ್ರಮಕ್ಕೆ ‘ದೈತ್ಯ’ರ ವಿನಾಯಿತಿಯೇಕೆ?

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ದಶಕಗಳಿಂದ ಕಾಂಗ್ರೆಸ್‌ನ ಗಟ್ಟಿಯಾದ ವೋಟ್ ಬ್ಯಾಂಕ್ ಆಗಿರುವ ಮುಸ್ಲಿಂ ಸಮುದಾಯದ ನಾಯಕರ ಮೇಲೆ ಪಕ್ಷ ಕೈಗೊಂಡಿರುವ ಶಿಸ್ತುಕ್ರಮವು ಈಗ ‘ದ್ವಂದ್ವ ನೀತಿ’ಯ ಚರ್ಚೆಗೆ ಗ್ರಾಸವಾಗಿದೆ.

ಘಟನೆಯ ಹಿನ್ನೆಲೆ:

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚು ಮುಸ್ಲಿಂ ಮತದಾರರಿದ್ದರೂ, ಈ ಬಾರಿ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡದೆ ಶಾಮನೂರು ಕುಟುಂಬದ ಸಮರ್ಥ್ ಶಾಮನೂರು ಅವರಿಗೆ ನೀಡಲಾಗಿದೆ. ಇದನ್ನು ವಿರೋಧಿಸಿ ಧ್ವನಿ ಎತ್ತಿದ ಎಂಎಲ್‍ಸಿ
ನಾಸಿರ್ ಅಹಮದ್ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಲಾಗಿದೆ ಮತ್ತು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ರಾಜೀನಾಮೆ ಪಡೆಯಲಾಗಿದೆ. ಜೊತೆಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನದಿಂದ ಅಬ್ದುಲ್ ಜಬ್ಬಾರ್ ಉಚ್ಚಾಟನೆ ಮಾಡಲಾಗಿದೆ.

ತಾರತಮ್ಯದ ಶಿಸ್ತುಕ್ರಮ:

ಹೈಕಮಾಂಡ್ ಸೂಚನೆ ಮೀರಿ ಪದೇ ಪದೇ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿರುವ ಯತೀಂದ್ರ ಸಿದ್ದರಾಮಯ್ಯ ಅವರ ಮೇಲೆ ಕ್ರಮವಿಲ್ಲವೇಕೆ?

ದೈತ್ಯ ನಾಯಕರ ವಿನಾಯಿತಿ:

ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ಜಾತಿಗಣತಿಯನ್ನು ಬಹಿರಂಗವಾಗಿ ವಿರೋಧಿಸಿದ ಮತ್ತು ವಿರೋಧ ಪಕ್ಷದ ಅಭ್ಯರ್ಥಿಗಳ ಪರ ಒಲವು ತೋರಿದ ಶಾಮನೂರು ಶಿವಶಂಕರಪ್ಪ ಅವರ ಮೇಲೆ ಕಾಂಗ್ರೆಸ್ ಮೌನ ವಹಿಸಿರುವುದೇಕೆ?

ವೋಟ್ ಬ್ಯಾಂಕ್ ರಾಜಕೀಯ:

ಕೇವಲ ಚುನಾವಣೆ ಸಮಯದಲ್ಲಿ ಮುಸ್ಲಿಂ ಮತಗಳನ್ನು ಬಳಸಿಕೊಳ್ಳುವ ಕಾಂಗ್ರೆಸ್, ಹಕ್ಕು ಕೇಳಿದಾಗ ‘ಶಿಸ್ತುಕ್ರಮ’ದ ಅಸ್ತ್ರ ಬಳಸುವುದು ಎಷ್ಟು ಸರಿ ಎಂಬ ಪ್ರಶ್ನೆ ಸಮುದಾಯದ ನಾಯಕರಿಂದ ಕೇಳಿಬರುತ್ತಿದೆ.

ಸಮುದಾಯದ ನೋವು:

ದಾವಣಗೆರೆಯಲ್ಲಿ ಶಾಮನೂರು ಕುಟುಂಬದ ಬೆಳವಣಿಗೆಗೆ ಮುಸ್ಲಿಂ ಮತದಾರರ ಕೊಡುಗೆ ಅಪಾರ. ಶಾಮನೂರು ಅವರೇ ಹಿಂದೆ ಕ್ಷೇತ್ರವನ್ನು ಮುಸ್ಲಿಮರಿಗೆ ಬಿಟ್ಟುಕೊಡುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಈಗ ಅಧಿಕಾರ ಹಂಚಿಕೆಯ ವಿಷಯ ಬಂದಾಗ ಸಮುದಾಯವನ್ನು ಕಡೆಗಣಿಸಿರುವುದು ಬಂಡಾಯಕ್ಕಿಂತ ಹೆಚ್ಚಾಗಿ ‘ಸಮುದಾಯದ ನೋವು’ ಎಂದು ವಿಶ್ಲೇಷಿಸಲಾಗುತ್ತಿದೆ.

Share

Leave a comment

Leave a Reply

Your email address will not be published. Required fields are marked *