Home ದಾವಣಗೆರೆ ದಾವಣಗೆರೆ ಮೀನುಗಾರರಿಗೆ ಸುವರ್ಣಾವಕಾಶ: ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!
ದಾವಣಗೆರೆಬೆಂಗಳೂರುವಾಣಿಜ್ಯ

ದಾವಣಗೆರೆ ಮೀನುಗಾರರಿಗೆ ಸುವರ್ಣಾವಕಾಶ: ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!

Share
ದಾವಣಗೆರೆ
Share

ದಾವಣಗೆರೆ: ಪ್ರಸಕ್ತ ಸಾಲಿನ ಮೀನುಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿಶೇಷವಾಗಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಮೀನುಗಾರರಿಗೆ ಈ ಕೆಳಗಿನ ಯೋಜನೆಗಳಡಿ ಸೌಲಭ್ಯಗಳನ್ನು ನೀಡಲಾಗುವುದು:

  • ಮೀನುಗಾರಿಕೆ ಸಲಕರಣೆ ಕಿಟ್‌ಗಳ ವಿತರಣೆ

  • ಫೈಬರ್ ಗ್ಲಾಸ್ ಹರಿಗೋಲು ವಿತರಣೆ

  • ‘ಮತ್ಸ್ಯವಾಹಿನಿ’ ಮತ್ತು ಮೀನು ಮಾರಾಟಕ್ಕೆ ಸಹಾಯ ಧನ

  • ಸಮಗ್ರ ಮೀನುಗಾರಿಕೆ ಅಭಿವೃದ್ಧಿ ಯೋಜನೆ

ಅರ್ಜಿ ಸಲ್ಲಿಕೆ ಹೇಗೆ?:

ಆಸಕ್ತ ಹಾಗೂ ಅರ್ಹ ಮೀನುಗಾರರು ತಮ್ಮ ಹತ್ತಿರದ ಮೀನುಗಾರಿಕೆ ಕಚೇರಿಯಿಂದ ಅರ್ಜಿಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 30 ರೊಳಗಾಗಿ ಆಯಾ ತಾಲೂಕಿನ ‘ಮೀನುಗಾರಿಕೆ ಸಹಾಯಕ ನಿರ್ದೇಶಕರ’ ಕಚೇರಿಗೆ ಸಲ್ಲಿಸಬೇಕಾಗಿ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles