Site icon Kannada News-suddikshana

ಐ ಲವ್ ಮುಹಮದ್ ಫ್ಲೆಕ್ಸ್ ಗಲಾಟೆ: ಉದ್ವಿಗ್ನಗೊಂಡಿದ್ದ ದಾವಣಗೆರೆ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಹೇಗಿದೆ ಪರಿಸ್ಥಿತಿ?

ದಾವಣಗೆರೆ

SUDDIKSHANA KANNADA NEWS/DAVANAGERE/DATE:25_09_2025

ದಾವಣಗೆರೆ: ಐ ಲವ್ ಮುಹಮದ್ ಫ್ಲೆಕ್ಸ್ ಅನ್ನು ಮನೆ ಮುಂದೆ ಅಳವಡಿಸಿದ್ದಕ್ಕೆ ಕೆರಳಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿದ್ದು, ಈ ವೇಳೆ ಕಲ್ಲುತೂರಾಟ ಆಗಿದೆ ಎಂಬ ಮಾಹಿತಿ ಲಭಿಸಿದೆ.

READ ALSO THIS STORY: ಶೋಷಿತ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಬಾಡದ ಆನಂದರಾಜು ಹೃದಯಾಘಾತಕ್ಕೆ ಬಲಿ: ಸ್ನೇಹಪರ ಜೀವಿಯ ಯಶೋಗಾಥೆ ಕಂಪ್ಲೀಟ್ ಡೀಟೈಲ್ಸ್

ಸ್ಥಳಕ್ಕೆ ಐಜಿಪಿ ರವಿಕಾಂತೇಗೌಡ, ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸದ್ಯಕ್ಕೆ ಶಾಂತವಾಗಿದ್ದು, ಅಹಿತಕರ ಘಟನೆ  ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗಿದೆ.

ಶಾಂತಿಯುತವಾಗಿದ್ದರೂ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಸೆಪ್ಬಂಬರ್ 24ರಂದು ರಾತ್ರಿ ದಾವಣಗೆರೆ ನಗರದ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರದಲ್ಲಿ ಎರಡು ಕೋಮಿನವರ ನಡುವೆ ಮಾತಿನ ಚಕಮಕಿ ನಡೆದಿದೆ. ಆ ಬಳಿಕ ಐ ಲವ್ ಮುಹಮದ್ ಫ್ಲೆಕ್ಸ್ ಹಾಕಿದ್ದಕ್ಕೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಉದ್ವಗ್ನಗೊಂಡಿದೆ. ಮಹಿಳೆಯರು ಹೇಳುವ ಪ್ರಕಾರ ಕಲ್ಲು ತೂರಾಟ ನಡೆಸಿದ್ದಾರೆ. ನೂರಾರು ಮಂದಿ ಬಂದು ಬಾಗಿಲು ಹೊಡೆದಿದ್ದಾರೆ. ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Exit mobile version