ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ಸಾರ್ವಜನಿಕರು ಹಾಗೂ ರೈತರಿಗೆ ಬೆಸ್ಕಾಂ (BESCOM) ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 1 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಸ್ಕಾಂ ಜಗಳೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ಗಳು ನೀಡಿರುವ ಮಾಹಿತಿಯ ಪ್ರಕಾರ, ಚಿಕ್ಕ ಉಜ್ಜನಿ ಎನ್ಜೆವೈ ಮತ್ತು ಎಲ್ಲಾ ಐಪಿ (ಪಂಪ್ಸೆಟ್) ಮಾರ್ಗಗಳಲ್ಲಿ ಅಗತ್ಯ ದುರಸ್ತಿ ಹಾಗೂ ಕಾರ್ಯನಿರ್ವಹಣಾ ಕಾಮಗಾರಿ ನಡೆಯಲಿದೆ.
ಸಮಯದ ವಿವರ:
ಜೂನ್ 1 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಾಯಂಕಾಲ 05:00 ಗಂಟೆಯವರೆಗೆ ಒಟ್ಟು 7 ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ಇರುವುದಿಲ್ಲ.
ಬಾಧಿತ ಪ್ರದೇಶಗಳು: ಚಿಕ್ಕ ಉಜ್ಜನಿ ಎನ್ಜೆವೈ ವ್ಯಾಪ್ತಿಯ ಎಲ್ಲಾ ಮಾರ್ಗಗಳು, ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳು ಹಾಗೂ ಐಪಿ ಸೆಟ್ ಆಧಾರಿತ ಕೃಷಿ ಭೂಮಿಗಳಿಗೆ ಈ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ರೈತರು ಬೆಸ್ಕಾಂ ಅಧಿಕಾರಿಗಳೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ.





Leave a comment