Home ದಾವಣಗೆರೆ ದಾವಣಗೆರೆ ಕಲಾವಿದರು ಹಾಗೂ ಸಂಘ-ಸಂಸ್ಥೆಗಳಿಗೆ ಸರ್ಕಾರದ ಆರ್ಥಿಕ ನೆರವು: ಅರ್ಜಿ ಸಲ್ಲಿಕೆ ಹೇಗೆ?
ದಾವಣಗೆರೆಬೆಂಗಳೂರುವಾಣಿಜ್ಯ

ದಾವಣಗೆರೆ ಕಲಾವಿದರು ಹಾಗೂ ಸಂಘ-ಸಂಸ್ಥೆಗಳಿಗೆ ಸರ್ಕಾರದ ಆರ್ಥಿಕ ನೆರವು: ಅರ್ಜಿ ಸಲ್ಲಿಕೆ ಹೇಗೆ?

Share
ದಾವಣಗೆರೆ
Share

ದಾವಣಗೆರೆ: ಪ್ರಸಕ್ತ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷೆ ಸಂವರ್ಧನೆ, ಕಲೆ ಸಂವರ್ಧನೆ, ಕಲೆ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ, ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ, ಸಂಸ್ಥೆಗಳಿಗೆ  ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕಾಗಿ, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲಾಗುವುದು.

 sevasindhu.karnataka.gov.in  ಮುಖಾಂತರ  ಆಗಸ್ಟ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ www.kannadasiri.karnataka.gov ಅಥವಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಾವಣಗೆರೆ ಹಾಗೂ ಜಿಲ್ಲಾ ವ್ಯವಸ್ಥಾಪಕರು ಇವರನ್ನು 0802410547, 08022213530, 9986837037, 08022241325 ಸಂಪರ್ಕಿಸಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *