ದಾವಣಗೆರೆ: ದಾವಣಗೆರೆಯ ದೂಡಾ ಮಾಜಿ ಅಧ್ಯಕ್ಷರ ಪುತ್ರರು ಪೊಲೀಸರ ಮೇಲೆ ಹಲ್ಲೆ ಮಾಡಿದರೂ ಇನ್ನೂ ಕಠಿಣ ಕ್ರಮವಿಲ್ಲ. ದೆಹಲಿ ಹೈಕಮಾಂಡ್ ಆದೇಶದಂತೆ ಅಲ್ಪಸಂಖ್ಯಾತರು ಕಾನೂನಿಗಿಂತ ಮಿಗಿಲಾಗಿದ್ದಾರೆಯೇ? ಎಂದು ರಾಜ್ಯ ಬಿಜೆಪಿ ಘಟಕವು ಆಕ್ರೋಶ ವ್ಯಕ್ತಪಡಿಸಿದೆ.
ಪೊಲೀಸರ ಮೇಲೆ ಹಲ್ಲೆ ನಡೆದರೂ ಸರ್ಕಾರಕ್ಕೆ ಮೌನವೇಕೆ? ಆರೋಪಿಗಳು “ಬ್ರದರ್ಸ್” ಎಂಬ ಕಾರಣಕ್ಕಾಗಿಯೇ? ಸರ್ಕಾರ ನಿಮ್ಮ “ಬ್ರದರ್ಸ್” ಗಳ ಆಶೀರ್ವಾದದಿಂದ ಬಂದಿದೆ ಎಂಬ ಕಾರಣಕ್ಕಾಗಿಯೇ? ಎಂದು ಪ್ರಶ್ನಿಸಿದೆ.
ಸಾಮಾನ್ಯ ಜನರ ರಕ್ಷಣೆ ಮಾಡಬೇಕಾದ ಇಲಾಖೆಯ ನೈತಿಕ ಸ್ಥೈರ್ಯವನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಲಿ ಕೊಡಬೇಡಿ. ಇದು ಓಲೈಕೆಯ ಪರಮಾವಧಿ! ಧಿಕ್ಕಾರವಿರಲಿ ಎಂದು ಹೇಳಿದೆ.
ಕಾಂಗ್ರೆಸ್ ಸರ್ಕಾರದಲ್ಲಿ ದೌರ್ಜನ್ಯಗಳು ನಿತ್ಯ ನಿರಂತರವಾಗಿದೆ. ಕಾಂಗ್ರೆಸ್ ಮುಖಂಡರು ಸರ್ಕಾರಿ ಅಧಿಕಾರಿ, ನೌಕರರು, ಪೊಲೀಸರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ದಾವಣಗೆರೆಯಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಕಾಂಗ್ರೆಸ್ ಗೂಂಡಾಗಳು ಹಲ್ಲೆ ನಡೆಸಿರುವುದು ಖಂಡನೀಯ. ಸರ್ಕಾರ ತನ್ನ ಪಕ್ಷದ ಗೂಂಡಾ ನಾಯಕರ ಮೇಲೆ ಯಾವುದೇ ಕ್ರಮಕೈಗೊಳ್ಳದ ಕಾರಣ ಈ ರೀತಿಯ ಘಟನೆಗಳು ಪುನರಾವರ್ತನೆಯಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಯು ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.
ನಗರದ ದೂಡಾ (DUDA) ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಅವರ ಪುತ್ರರು ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ “ವೋಟ್ ಬ್ಯಾಂಕ್” ರಾಜಕಾರಣಕ್ಕಾಗಿ ಸುಮ್ಮನಿದೆ ಎಂದು ಟೀಕಿಸಿದೆ.
ಘಟನೆಯ ಹಿನ್ನೆಲೆ:
ಆರಂಭಿಕ ಸಂಘರ್ಷ: ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪೊಲೀಸರು ಅಯೂಬ್ ಪೈಲ್ವಾನ್ ಅವರ ಮನೆಗೆ ತೆರಳಿದ್ದರು.
ಪೊಲೀಸರ ಮೇಲೆ ದಾಳಿ: ಈ ವೇಳೆ ಅಯೂಬ್ ಪೈಲ್ವಾನ್ ಪುತ್ರರಾದ ಹಸನ್ ಮತ್ತು ಹುಸೇನ್, ಮಹಿಳಾ ಸಿಪಿಐ (CPI) ಗಾಯತ್ರಿ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ಅಧಿಕಾರಿಗಳ ಮೊಬೈಲ್ ಕಿತ್ತುಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಕಾನೂನು ಕ್ರಮ: ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 20ಕ್ಕೂ ಹೆಚ್ಚು ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಈಗಾಗಲೇ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬಿಜೆಪಿಯ ವಾಗ್ದಾಳಿ:
ರಾಜ್ಯ ಬಿಜೆಪಿ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, “ಬ್ರದರ್ಸ್” ಎಂಬ ಕಾರಣಕ್ಕೆ ಸರ್ಕಾರ ಮೃದು ಧೋರಣೆ ತಳೆಯುತ್ತಿದೆಯೇ ಎಂದು ಪ್ರಶ್ನಿಸಿದೆ. “ಖಾಕಿ ಪಡೆಯ ಮೇಲೆ ಹಲ್ಲೆ ನಡೆಸುವ ಧೈರ್ಯ ಈ ಗೂಂಡಾ ನಾಯಕರಿಗೆ ಎಲ್ಲಿಂದ ಬಂತು? ಇದು ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದ ಫಲ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದೆ.






Leave a comment