ದಾವಣಗೆರೆ: ಶಾಲಾ, ಕಾಲೇಜುಗಳ ಅವರಣದ ಬಳಿ ಅಂಗಡಿ ಮತ್ತು ಶಾಪ್ಗಳಲ್ಲಿ ಗುಟ್ಕಾ ಮತ್ತು ತಂಬಾಕು ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
READ ALSO THIS STORY: BIG BREAKING: ‘ಕೊರಳಪಟ್ಟಿ ಹಿಡಿದು ಕೇಳ್ತೇನೆಂದಿದ್ದ” ಹೆಚ್. ಬಿ. ಮಂಜಪ್ಪ ವಿರುದ್ಧ ಪೊಲೀಸ್ ಮಹಾನಿರ್ದೇಶಕರಿಗೆ ಎಂ. ಪಿ. ರೇಣುಕಾಚಾರ್ಯ ದೂರು!
ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರು ದಾವಣಗೆರೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಶಾಲಾ, ಕಾಲೇಜುಗಳ ಬಳಿ 100 ಯಾರ್ಡ್ಸ್ ಅಂತರದಲ್ಲಿರುವ ಅಂಗಡಿ ಮತ್ತು ಶಾಪ್ಗಳಲ್ಲಿ ಗುಟ್ಕಾ ಮತ್ತು ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಅಭಿಯಾನ ನಡೆಸಲು ಪ್ರಕರಣಗಳನ್ನು ದಾಖಲಿಸಲು ಸೂಚಿಸಿದ್ದರು. ಅದರಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ಹಾಗೂ ಪೊಲೀಸ್ ಉಪ ವಿಭಾಗದ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ದಾವಣಗೆರೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಆಯಾ ಠಾಣಾಧಿಕಾರಿಗಳ ಸಾರಥ್ಯದಲ್ಲಿ ವಿಶೇಷ ಅಭಿಯಾನವನ್ನು ನಡೆಸಲಾಯಿತು.
ಶಾಲಾ, ಕಾಲೇಜುಗಳ ಬಳಿ 100 ಯಾರ್ಡ್ಸ್ ಅಂತದಲ್ಲಿರುವ ಅಂಗಡಿ, ಶಾಪ್ಗಳಲ್ಲಿ ಗುಟ್ಕಾ ಹಾಗೂ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿ ಮತ್ತು ಶಾಪ್ಗಳ ಮೇಲೆ 665 ಕಡೆ ದಾಳಿ ನಡೆಸಿದ್ದು, ಒಟ್ಟು 73,390 ರೂಪಾಯಿ ದಂಡ ವಿಧಿಸಲಾಗಿದೆ. ಗುಟ್ಕಾ ಮತ್ತು ತಂಬಾಕು ಮಾರಾಟ ಮಾಡದಂತೆ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಲಾಗಿದೆ.
ಸಾರ್ವಜನಿಕರ ಗಮನಕ್ಕೆ:
ಶಾಲಾ, ಕಾಲೇಜುಗಳ ಬಳಿ 100 ಯಾರ್ಡ್ಸ್ ಅಂತರದಲ್ಲಿರುವ ಅಂಗಡಿ ಮತ್ತು ಶಾಪ್ಗಳಲ್ಲಿ ಗುಟ್ಕಾ ಮತ್ತು ತಂಬಾಕು ಮಾರಾಟ ನಿಷೇಧವಿದೆ. ಕಾನೂನು ಬಾಹಿರವಾಗಿ ಮಾರಾಟ ಮಾಡಿದರೆಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.





Leave a comment