Home ದಾವಣಗೆರೆ ದಾವಣಗೆರೆ: ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನ ಹಾಗೂ ವಿದ್ಯಾಸಿರಿ ಯೋಜನೆಗೆ ಅರ್ಜಿ ಆಹ್ವಾನ; ಆಗಸ್ಟ್ 31 ಕೊನೆಯ ದಿನ
ದಾವಣಗೆರೆಬೆಂಗಳೂರು

ದಾವಣಗೆರೆ: ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನ ಹಾಗೂ ವಿದ್ಯಾಸಿರಿ ಯೋಜನೆಗೆ ಅರ್ಜಿ ಆಹ್ವಾನ; ಆಗಸ್ಟ್ 31 ಕೊನೆಯ ದಿನ

Share
ದಾವಣಗೆರೆ
Share

ದಾವಣಗೆರೆ: ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸಹಾಯ ಯೋಜನೆ ಹಾಗೂ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಪ್ರವರ್ಗ-1 ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ‘ವಿದ್ಯಾಸಿರಿ’ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಅಧಿಕೃತ ವೆಬ್‌ಸೈಟ್ [suspicious link removed] ನಲ್ಲಿ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಹೆಚ್ಚಿನ ವಿವರಗಳಿಗಾಗಿ ಸಂಬಂಧಪಟ್ಟ ತಾಲ್ಲೂಕು/ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳನ್ನು ಅಥವಾ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಸಂಪರ್ಕಿಸಬಹುದು. ತಾಂತ್ರಿಕ ನೆರವಿಗಾಗಿ ದೂರವಾಣಿ ಸಂಖ್ಯೆ: 8050770004, ಇಮೇಲ್: postmatrichelp@karnataka.gov.in ಅಥವಾ ಎಸ್‌ಎಸ್‌ಪಿ ಸಹಾಯವಾಣಿ ಸಂಖ್ಯೆ 1902 ಗೆ ಕರೆ ಮಾಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *