ದಾವಣಗೆರೆ: ಪ್ರಸ್ತುತ ಜಲಾಶಯಗಳ ಒಳಹರಿವು ಸಾಮಾನ್ಯಕ್ಕಿಂತ ಕಡಿಮೆಯಾಗಿದ್ದು, ಜಿಲ್ಲೆಯ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹಾಗೂ ರಾಜ್ಯ ಜಲನೀತಿಗಳನ್ವಯ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿಗೆ ಮಾತ್ರ ಮೀಸಲು ಇಡಬೇಕಾಗಿದೆ.
ಮುಂಬರುವ ದಿನಗಳಲ್ಲಿ ಎಲ್ ನಿನೋ ಪರಿಣಾಮದಿಂದ ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಮಾನ ಇಲಾಖೆಯು ಸೂಚನೆ ನೀಡಿರುವುದರಿಂದ ರಾಜ್ಯದ ಹಲವು ಕಡೆ ಬರ ಬರಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ‘ಜಲಾಶಯ ನಂಬಿಕೊಂಡು ಯಾವ ರೈತರು ಬೆಳೆ ಹಾಕಬಾರದು.
ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ಜಲಾಶಯಗಳಲ್ಲಿನ ನೀರನ್ನು ಕುಡಿಯುವ ನೀರಿಗೆ ಕಾಯ್ದಿರಿಸಲು ನಿರ್ದೇಶನಗಳಿರುವುದರಿಂದ ರೈತರು ಜಲಾಶಯದ ನೀರನ್ನು ಅವಲಂಭಿಸಿರುವ ಬೆಳೆಗಳನ್ನು ಹಾಗೂ ಅಧಿಕ ನೀರು ಬೇಡುವ ಬೆಳೆಗಳನ್ನು ಬೆಳೆಯದಂತೆ ಹಾಗೂ ರೈತರು ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಕೃಷಿ ಇಲಾಖಾಧಿಕಾರಿಗಳು ನೀಡುವ ಸಲಹೆಯಂತೆ ಮಳೆ ಆಶ್ರಿತ ಬೆಳೆಗಳನ್ನು ಬೆಳೆಯಬೇಕಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಗಂಗಾಧರಸ್ವಾಮಿ ಜಿ. ಎಂ. ತಿಳಿಸಿದ್ದಾರೆ.
- Davanagere dam water supply
- DAVANAGERE NEWS
- Davanagere water scarcity
- DC GM Gangadharaswamy
- drinking water reserve
- El Nino impact Karnataka
- Karnataka agriculture advisories
- Karnataka drought alert
- rainfed crops Karnataka
- ಎಲ್ ನಿನೋ ಪರಿಣಾಮ
- ಕರ್ನಾಟಕ ಬರಗಾಲ
- ಕುಡಿಯುವ ನೀರಿನ ಅಭಾವ
- ಕೃಷಿ ಇಲಾಖೆ ಸಲಹೆ
- ಜಲಾಶಯಗಳ ಒಳಹರಿವು
- ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
- ದಾವಣಗೆರೆ ಜಿಲ್ಲಾಡಳಿತ
- ದಾವಣಗೆರೆ ಸುದ್ದಿ
- ಮಳೆ ಆಶ್ರಿತ ಬೆಳೆಗಳು





Leave a comment