Home ದಾವಣಗೆರೆ ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
ದಾವಣಗೆರೆನವದೆಹಲಿಬೆಂಗಳೂರು

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

Share
ದಾವಣಗೆರೆ
Share

ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ ಇತ್ತು. ವಾಹನಗಳ ಓಡಾಟವೂ ಯಥಾಸ್ಥಿತಿ ಇತ್ತು. ಅಂಗಡಿ ಮುಂಗಟ್ಟುಗಳು ಬಂದ್ ಆಗಲಿಲ್ಲ. ಶಾಲಾ ಕಾಲೇಜುಗಳು ಎಂದಿನಂತೆ ನಡೆದವು.

ನಗರದ ಜಯದೇವ ವೃತ್ತದಲ್ಲಿ ಮಾಜಿ ಸಚಿವ ಎಸ್. ಎ. ರವೀಂದ್ರನಾಥ್ ನೇತೃತ್ವದಲ್ಲಿ ಲೋಕಿಕೆರೆ ನಾಗರಾಜ್, ಲಿಂಗರಾಜ್ ಶಾಮನೂರು, ಕೊಳೇನಹಳ್ಳಿ ಸತೀಶ್ ಸೇರಿದಂತೆ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಹೆದ್ದಾರಿ ಬಂದ್ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಸಂಜೆ ಹೊತ್ತಿಗೆ ಬಿಡುಗಡೆ ಮಾಡಿದರು.

ದಾವಣಗೆರೆ ಬಂದ್ ಯಶಸ್ವಿ ಆಗಲಿಲ್ಲ. ಬಂದ್ ಎಂಬಂತ ವಾತಾವರಣವೂ ನಿರ್ಮಾಣ ಆಗಿರಲಿಲ್ಲ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿಲ್ಲ. ಮಳೆ ಆರಂಭವಾದ ಕಾರಣ ಕಡಿಮೆ ಪ್ರಮಾಣದಲ್ಲಿ ಸೇರಿದ್ದ ರೈತ ಮುಖಂಡರು ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ವಿರುದ್ಧ ಘೋಷಣೆ ಹಾಕಿದರು. ಕೂಡಲೇ ಭದ್ರಾ ಡ್ಯಾಂ ನೀರು ಹರಿಸುವ ಮೂಲಕ ರೈತರ ಹಿತ ಕಾಪಾಡುವಂತೆ ಒತ್ತಾಯಿಸಿದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles