ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ವಾಹನ ತಡೆಯುವಂತಿಲ್ಲ, ಶಾಲಾ ಕಾಲೇಜು ಮುಚ್ಚಿಸುವಂತಿಲ್ಲ: ಕರ್ನಾಟಕ ಬಂದ್ ಬೆಂಬಲಿತರಿಗೆ ದಾವಣಗೆರೆ ಪೊಲೀಸರ ಸೂಚನೆ

On: March 21, 2025 10:15 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:21-03-2025

ದಾವಣಗೆರೆ: ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಮತ್ತು ಇತರೆ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಕನ್ನಡ ಕಂಡಕ್ಟರ್ ಮೇಲೆ ಮರಾಠಿಗಳ ದಾಳಿ ಕೇಸ್ ಸಮಗ್ರವಾಗಿ ತನಿಖೆ ಆಗಬೇಕು. ಎಂಇಎಸ್ ನಿಷೇಧಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 22 ರಂದು ಕರ್ನಾಟಕೆ ಬಂದ್ ಗೆ ಕರೆ ನೀಡಿದ್ದು, ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯು ಸೂಚನೆಗಳನ್ನು ನೀಡಿದೆ.

ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿರುವುದು ತಿಳಿದು ಬಂದಿದ್ದು, ಈ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.

– ಬಂದ್ ಕರೆ ಸಂಬಂಧ ಘನ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘನೆ ಮಾಡುವಂತಿಲ್ಲ
– ಒತ್ತಾಯಪೂರ್ವಕವಾಗಿ ಅಥವಾ ಬಲವಂತವಾಗಿ ಯಾವುದೇ ಶಾಲಾ-ಕಾಲೇಜು, ಸರ್ಕಾರಿ/ಖಾಸಗಿ ಸಂಸ್ಥೆಗಳನ್ನು ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ, ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು
ರೀತ್ಯಾ ಕ್ರಮವಹಿಸಲಾಗುವುದು.
– ಬಂದ್ ಸಂಬಂಧ ಸಾರ್ವಜನಿಕರ ಜನ-ಜೀವನಕ್ಕೆ, ವಾಹನ ಮತ್ತು ಆಸ್ತಿ-ಪಾಸ್ತಿ ನಾಶ ಮಾಡುವಂತಿಲ್ಲ.
– ಯಾವುದೇ ರಸ್ತೆ ತಡೆಗೆ ಹಾಗೂ ವಾಹನ ಅಡ್ಡಗಟ್ಟುವುದಕ್ಕೆ ಅವಕಾಶ ಇಲ್ಲ. ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವಂತಿಲ್ಲ ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕ್ರಮ ಖಚಿತ.
– ಯಾವುದೇ ಕಾರಣಕ್ಕೂ ತುರ್ತು ಸೇವೆಗಳಿಗೆ ಮತ್ತು ಅಗತ್ಯ ವಸ್ತುಗಳ ಸಾಗಾಣಿಕೆ ಅಡ್ಡಿಪಡಿಸುವಂತಿಲ್ಲ.
– ಬಂದ್ ಸಂಬಂಧ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಟೈರ್ ಗಳನ್ನು ಹಾಕಿ ಬೆಂಕಿ ಹಚ್ಚುವಂತಿಲ್ಲ. ಯಾವುದೇ ಪ್ರತಿಕೃತಿಗಳನ್ನು ದಹಿಸುವಂತಿಲ್ಲ.
– ಬಂದ್ ಹೆಸರಿನಲ್ಲಿ ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಂಡರೆ ಅವರ ವಿರುದ್ಧ ಪೊಲೀಸ್ ಇಲಾಖೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ.
– ಬಂದ್ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಡುವುದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಪೋಸ್ಟ್ ಗಳನ್ನು ಹಾಕುವುದಾಗಲೀ ಹಾಗೂ ಶೇರ್ ಮಾಡುವುದಾಗಲೀ ಕಂಡು ಬಂದರೆ
ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
– ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ದತಯುತವಾಗಿ ಪ್ರತಿಭಟನೆ ನಡೆಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ತುರ್ತು ಸಹಾಯವಣಿ 112 ಗೆ ಕರೆ ಮಾಡಿ.
ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮಾಹಿತಿ ನೀಡಿ.

ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ವತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ, ಸಶಸ್ತ್ರ ತುಕಡಿಗಳು ಹಾಗೂ ಬಂದ್ ಸಮಯದಲ್ಲಿ ನಗರದಲ್ಲಿ ಕಣ್ಗಾವಲಿಗಾಗಿ ಡ್ರೋನ್ ಗಳನ್ನು ನಿಯೋಜಿಸಲಾಗಿದೆ ಎಂದು
ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment