Home ಕ್ರೈಂ ನ್ಯೂಸ್ BIG BREAKING: ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ನಲ್ಲಿ ಎಸ್‌ಡಿಪಿಐಗೆ ಜಮೀರ್ ಅಹ್ಮದ್ ಟೀಂನಿಂದ 10 ಕೋಟಿ ರೂ. ನೆರವು? ಹೈಕಮಾಂಡ್ ಗೆ ದೂರು, ಶಿಸ್ತು ಕ್ರಮಕ್ಕೆ ಚಿಂತನೆ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

BIG BREAKING: ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ನಲ್ಲಿ ಎಸ್‌ಡಿಪಿಐಗೆ ಜಮೀರ್ ಅಹ್ಮದ್ ಟೀಂನಿಂದ 10 ಕೋಟಿ ರೂ. ನೆರವು? ಹೈಕಮಾಂಡ್ ಗೆ ದೂರು, ಶಿಸ್ತು ಕ್ರಮಕ್ಕೆ ಚಿಂತನೆ!

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಆಂತರಿಕ ಕಲಹ ಶುರುವಾಗಿದೆ. ಸ್ವಪಕ್ಷದ ಅಭ್ಯರ್ಥಿಯ ವಿರುದ್ಧವೇ ಕೆಲಸ ಮಾಡಿದ ಆರೋಪದ ಮೇಲೆ ಸಚಿವ ಜಮೀರ್ ಅಹಮದ್ ಖಾನ್ ಮತ್ತು ಇಬ್ಬರು ಎಂಎಲ್‌ಸಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಹೈಕಮಾಂಡ್ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪದ ಹಿನ್ನೆಲೆ:

ಏಪ್ರಿಲ್ 9 ರಂದು ನಡೆದ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಅವರ ವಿರುದ್ಧವಾಗಿ ಎಸ್‌ಡಿಪಿಐ (SDPI) ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರಿಗೆ ಬೆಂಬಲ ನೀಡಿದ ಆರೋಪ ಕೇಳಿಬಂದಿದೆ.

ಬೆಂಬಲ ಕೊಟ್ಟ ಪ್ರಮುಖ ನಾಯಕರು:

ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್, ಎಂಎಲ್‌ಸಿಗಳಾದ ನಸೀರ್ ಅಹಮದ್ ಮತ್ತು ಅಬ್ದುಲ್ ಜಬ್ಬಾರ್ ಅವರು ಎಸ್‌ಡಿಪಿಐ ಅಭ್ಯರ್ಥಿಗೆ ರಹಸ್ಯವಾಗಿ ₹10 ಕೋಟಿ ಹಣಕಾಸಿನ ನೆರವು ನೀಡಿದ್ದಾರೆ ಎಂದು ಪಕ್ಷದ ಮೂಲಗಳು ಆರೋಪಿಸಿವೆ.

ಕಾರಣ:

ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರು ಹೆಚ್ಚಾಗಿರುವುದರಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಈ ನಾಯಕರು ಒತ್ತಾಯಿಸಿದ್ದರು. ಆದರೆ ಹೈಕಮಾಂಡ್ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಅವರಿಗೆ
ಟಿಕೆಟ್ ನೀಡಿದ್ದು ಈ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ.

ಮುಂದಿನ ಕ್ರಮ:

ಎಐಸಿಸಿ (AICC) ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಚಿವ ಜಮೀರ್ ಮತ್ತು ಎಂಎಲ್‌ಸಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಮತ ಎಣಿಕೆಯು ಮೇ 4ರಂದು ನಡೆಯಲಿದೆ.

Share

Leave a comment

Leave a Reply

Your email address will not be published. Required fields are marked *